<p>ಉಜಿರೆ: ‘ಭಾರತದ ದೇಶೀಯ ಕ್ರೀಡೆ ಕಬಡ್ಡಿ ಇಂದು ವಿದೇಶಗಳಲ್ಲೂ ಜನಪ್ರಿಯವಾಗುತ್ತಿದೆ. ಶಿಸ್ತು, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದೊಂದಿಗೆ ನಿರಂತರ ಅಭ್ಯಾಸ ಮಾಡಿ ದೇಹವನ್ನು ಪಳಗಿಸಿಕೊಂಡರೆ ಕಬಡ್ಡಿಯಲ್ಲಿ ಉನ್ನತ ಸಾಧನೆ ಮಾಡಬಹುದು’ ಎಂದು ಅಂತರರಾಷ್ಟ್ರೀಯ ಕಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಹೇಳಿದರು.</p>.<p>ಉಜಿರೆ ಎಸ್ಡಿಎಂ ಎಂಜಿನಿಯಿಂಗ್ ಕಾಲೇಜಿನ ಆಶ್ರಯದಲ್ಲಿ ಎಸ್ಡಿಎಂ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. (ವಿಟಿಯು) ಪುರುಷರ ಅಂತರ ಕಾಲೇಜು ಕಬಡ್ಡಿ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ರೀಡಾಪಟುಗಳಿಗೆ ಉತ್ತಮ ವೇತನದೊಂದಿಗೆ ದೇಶ- ವಿದೇಶಗಳಲ್ಲಿ ವಿಪುಲ ಉದ್ಯೋಗ ಅವಕಾಶಗಳಿವೆ. ಕ್ರೀಡಾಪಟುಗಳು ಹೆಚ್ಚು ಭಾಷೆಗಳನ್ನು ಕಲಿಯಬೇಕು ಎಂದೂ ಅವರು ಸಲಹೆ ನೀಡಿದರು. ಆರು ಮಂದಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರರನ್ನು ರೂಪಿಸಿದ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕೊಡುಗೆ ಶ್ಲಾಘನೀಯ ಎಂದರು.</p>.<p>ಎಸ್ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ, ಬೆಳ್ತಂಗಡಿ ಉಪವಲಯ ಅರಣ್ಯಾಧಿಕಾರಿ ರಂಜಿತ್ ಕುಮಾರ್ ಮಾತನಾಡಿ, ಕ್ರೀಡಾಪಟುಗಳು ಸಮಚಿತ್ತ ಮತ್ತು ದೃಢ ಸಂಕಲ್ಪದೊಂದಿಗೆ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಎಂಜಿನಿ ಯರಿಂಗ್ ಕಾಲೇಜಿನ ಪ್ರಾಂಶು ಪಾಲ ಅಶೋಕಕುಮಾರ್ ಟಿ. ಮಾತನಾಡಿದರು. ಎಸ್ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ, ಕಬಡ್ಡಿ ತರಬೇತುದಾರ ಬಿ.ಕೆ. ಕೃಷ್ಣಾನಂದ, ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ ಎ. ಭಾಗವಹಿಸಿದ್ದರು.</p>.<p>ವಿದ್ಯಾರ್ಥಿಗಳಾದ ಅನೀಶ್ ಮತ್ತು ಕಲ್ಪಿತಾ ನಿರ್ವಹಿಸಿದರು. ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-29-880911895</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ‘ಭಾರತದ ದೇಶೀಯ ಕ್ರೀಡೆ ಕಬಡ್ಡಿ ಇಂದು ವಿದೇಶಗಳಲ್ಲೂ ಜನಪ್ರಿಯವಾಗುತ್ತಿದೆ. ಶಿಸ್ತು, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದೊಂದಿಗೆ ನಿರಂತರ ಅಭ್ಯಾಸ ಮಾಡಿ ದೇಹವನ್ನು ಪಳಗಿಸಿಕೊಂಡರೆ ಕಬಡ್ಡಿಯಲ್ಲಿ ಉನ್ನತ ಸಾಧನೆ ಮಾಡಬಹುದು’ ಎಂದು ಅಂತರರಾಷ್ಟ್ರೀಯ ಕಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಹೇಳಿದರು.</p>.<p>ಉಜಿರೆ ಎಸ್ಡಿಎಂ ಎಂಜಿನಿಯಿಂಗ್ ಕಾಲೇಜಿನ ಆಶ್ರಯದಲ್ಲಿ ಎಸ್ಡಿಎಂ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. (ವಿಟಿಯು) ಪುರುಷರ ಅಂತರ ಕಾಲೇಜು ಕಬಡ್ಡಿ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ರೀಡಾಪಟುಗಳಿಗೆ ಉತ್ತಮ ವೇತನದೊಂದಿಗೆ ದೇಶ- ವಿದೇಶಗಳಲ್ಲಿ ವಿಪುಲ ಉದ್ಯೋಗ ಅವಕಾಶಗಳಿವೆ. ಕ್ರೀಡಾಪಟುಗಳು ಹೆಚ್ಚು ಭಾಷೆಗಳನ್ನು ಕಲಿಯಬೇಕು ಎಂದೂ ಅವರು ಸಲಹೆ ನೀಡಿದರು. ಆರು ಮಂದಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರರನ್ನು ರೂಪಿಸಿದ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕೊಡುಗೆ ಶ್ಲಾಘನೀಯ ಎಂದರು.</p>.<p>ಎಸ್ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ, ಬೆಳ್ತಂಗಡಿ ಉಪವಲಯ ಅರಣ್ಯಾಧಿಕಾರಿ ರಂಜಿತ್ ಕುಮಾರ್ ಮಾತನಾಡಿ, ಕ್ರೀಡಾಪಟುಗಳು ಸಮಚಿತ್ತ ಮತ್ತು ದೃಢ ಸಂಕಲ್ಪದೊಂದಿಗೆ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಎಂಜಿನಿ ಯರಿಂಗ್ ಕಾಲೇಜಿನ ಪ್ರಾಂಶು ಪಾಲ ಅಶೋಕಕುಮಾರ್ ಟಿ. ಮಾತನಾಡಿದರು. ಎಸ್ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ, ಕಬಡ್ಡಿ ತರಬೇತುದಾರ ಬಿ.ಕೆ. ಕೃಷ್ಣಾನಂದ, ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ ಎ. ಭಾಗವಹಿಸಿದ್ದರು.</p>.<p>ವಿದ್ಯಾರ್ಥಿಗಳಾದ ಅನೀಶ್ ಮತ್ತು ಕಲ್ಪಿತಾ ನಿರ್ವಹಿಸಿದರು. ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-29-880911895</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>