<p>ಹಳಿಯಾಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯ ವಿಭಾಗ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಲ್ಲಿನ ಕರ್ನಾಟಕ ಲಾ ಸೊಸೈಟಿಯ ವಿಡಿಐಟಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p>ಮೇ 4 ಮತ್ತು 5 ರಂದು ಎಜಿಎಂಆರ್ ವರೂರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಚಿಕ್ಕೋಡಿಯ ಕೆಎಲ್ಇ ತಾಂತ್ರಿಕ ಮಹಾವಿದ್ಯಾಲಯದ ತಂಡವನ್ನು ಮಣಿಸಿ ವಿಡಿಐಟಿ ಜಯ ಗಳಿಸಿದೆ.</p>.<p>ಶೀತಲ್, ಆಕಾಶ್, ಪ್ರಜ್ವಲ್, ನ್ಯೂಮನ್, ಕಾರ್ತಿಕ್, ನಿಖಿಲ್, ರಿಹಾನ್ಬಕ್ಷ, ಕಾರ್ತಿಕ್ ಜಿ, ಪೃಥ್ವಿ, ದಿನೇಶ್, ಅಕಿಬ್ ಅಹಮದ್, ಮಹಮದ್ ಉಜೆಫಾ ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಿದ್ದರು.</p>.<p>ಮೇ 7 ಮತ್ತು 8ರಂದು ತುಮಕೂರಿನ ಎಸ್ಐಟಿ ಮಹಾವಿದ್ಯಾಲಯದಲ್ಲಿ ನಡೆಯರುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ವಿಡಿಐಟಿ ತಂಡ ಅರ್ಹತೆ ಪಡೆದುಕೊಂಡಿದೆ.</p>.<p>ಆಡಳಿತ ಮಂಡಳಿ ಅಧ್ಯಕ್ಷ ಪ್ರಶಾಂತ್ ಕುಲಕರ್ಣಿ ಹಾಗೂ ಪ್ರಾಚಾರ್ಯ ಡಾ.ವಿ.ಎ.ಕುಲಕರ್ಣಿ, ದೈಹಿಕ ಶಿಕ್ಷಣ ನಿರ್ದೇಶಕ ಗದಿಗಪ್ಪ ಎಳ್ಳೂರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-20-1614372045</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳಿಯಾಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯ ವಿಭಾಗ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಲ್ಲಿನ ಕರ್ನಾಟಕ ಲಾ ಸೊಸೈಟಿಯ ವಿಡಿಐಟಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p>ಮೇ 4 ಮತ್ತು 5 ರಂದು ಎಜಿಎಂಆರ್ ವರೂರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಚಿಕ್ಕೋಡಿಯ ಕೆಎಲ್ಇ ತಾಂತ್ರಿಕ ಮಹಾವಿದ್ಯಾಲಯದ ತಂಡವನ್ನು ಮಣಿಸಿ ವಿಡಿಐಟಿ ಜಯ ಗಳಿಸಿದೆ.</p>.<p>ಶೀತಲ್, ಆಕಾಶ್, ಪ್ರಜ್ವಲ್, ನ್ಯೂಮನ್, ಕಾರ್ತಿಕ್, ನಿಖಿಲ್, ರಿಹಾನ್ಬಕ್ಷ, ಕಾರ್ತಿಕ್ ಜಿ, ಪೃಥ್ವಿ, ದಿನೇಶ್, ಅಕಿಬ್ ಅಹಮದ್, ಮಹಮದ್ ಉಜೆಫಾ ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಿದ್ದರು.</p>.<p>ಮೇ 7 ಮತ್ತು 8ರಂದು ತುಮಕೂರಿನ ಎಸ್ಐಟಿ ಮಹಾವಿದ್ಯಾಲಯದಲ್ಲಿ ನಡೆಯರುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ವಿಡಿಐಟಿ ತಂಡ ಅರ್ಹತೆ ಪಡೆದುಕೊಂಡಿದೆ.</p>.<p>ಆಡಳಿತ ಮಂಡಳಿ ಅಧ್ಯಕ್ಷ ಪ್ರಶಾಂತ್ ಕುಲಕರ್ಣಿ ಹಾಗೂ ಪ್ರಾಚಾರ್ಯ ಡಾ.ವಿ.ಎ.ಕುಲಕರ್ಣಿ, ದೈಹಿಕ ಶಿಕ್ಷಣ ನಿರ್ದೇಶಕ ಗದಿಗಪ್ಪ ಎಳ್ಳೂರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-20-1614372045</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>