<p>ವಿಜಯಪುರ: ‘ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯಂತ ಅಗತ್ಯವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೂ ಮಹತ್ವದ ಪಾತ್ರವಹಿಸುತ್ತವೆ’ ಎಂದು ಬಸವನ ಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎನ್.ಬಿ.ಹೊಸಮನಿ ಹೇಳಿದರು.</p>.<p>ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎರಡನೇ ವಲಯದ ಅಂತರ ಮಹಾವಿದ್ಯಾಲಯಗಳ ಪುರುಷರ ಕಬ್ಬಡ್ಡಿ ಪಂದ್ಯಾವಳಿಯ ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕ್ರೀಡೆಗಳು ತಂಡದ ಕೆಲಸ, ನಾಯಕತ್ವ ಹಾಗೂ ಶಿಸ್ತಿನಂತಹ ಗುಣಗಳನ್ನು ಬೆಳೆಸುತ್ತವೆ. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸಮರ್ಪಕ ಯೋಜನೆ ಹಾಗೂ ಒಗ್ಗಟ್ಟಿನೊಂದಿಗೆ ಆಟವಾಡಿದಾಗ ಮಾತ್ರ ಯಶಸ್ಸು ಸಾಧ್ಯವೆಂದು’ ಹೇಳಿದರು.</p>.<p>ಪ್ರಾಂಶುಪಾಲ ಎ.ಐ.ಹಂಜಗಿ ಮಾತನಾಡಿ, ‘ಕ್ರೀಡಾಪಟುಗಳು ಸದಾ ಕ್ರೀಡಾ ಸ್ಪೂರ್ತಿಯಿಂದ ಆಡಬೇಕು. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯುತ್ತವೆ’ ಎಂದು ತಿಳಿಸಿದರು.</p>.<p>ಫೈನಲ್ ಪಂದ್ಯದಲ್ಲಿ ಆತಿಥೇಯ ಸರ್ಕಾರಿ ಪದವಿ ಕಾಲೇಜು, ವಿಜಯಪುರ ಮತ್ತು ಬಂಜಾರಾ ಪದವಿ ಕಾಲೇಜು ತಂಡಗಳ ನಡುವೆ ರೋಚಕ ಪೈಪೋಟಿ ನಡೆಯಿತು.</p>.<p>ಸಮಬಲದ ಹೋರಾಟದ ಬಳಿಕ ಬಂಜಾರಾ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು, ಆತಿಥೇಯ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು.</p>.<p>ಆಹೇರಿಯ ಸಂಜಯ ಜಾಧವ, ಐ.ಕ್ಯೂ.ಎ.ಸಿ ಸಂಚಾಲಕ ಪ್ರೊ. ಆರ್.ಎಸ್.ಕುರಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಕ್ರೀಡಾ ನಿರ್ದೇಶಕಿ ರೇಣುಕಾ ಅಂಬಲಿ, ಚಿದಾನಂದ ಆನೂರ, ಸುನೀಲ ತೋಂಟಾಪೂರ, ಪ್ರೊ. ಎಂ.ಎಸ್.ಖೊದ್ನಾಪೂರ, ಪ್ರೊ. ಸುನೀಲ ಹತ್ತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-883142247</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯಂತ ಅಗತ್ಯವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೂ ಮಹತ್ವದ ಪಾತ್ರವಹಿಸುತ್ತವೆ’ ಎಂದು ಬಸವನ ಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎನ್.ಬಿ.ಹೊಸಮನಿ ಹೇಳಿದರು.</p>.<p>ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎರಡನೇ ವಲಯದ ಅಂತರ ಮಹಾವಿದ್ಯಾಲಯಗಳ ಪುರುಷರ ಕಬ್ಬಡ್ಡಿ ಪಂದ್ಯಾವಳಿಯ ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕ್ರೀಡೆಗಳು ತಂಡದ ಕೆಲಸ, ನಾಯಕತ್ವ ಹಾಗೂ ಶಿಸ್ತಿನಂತಹ ಗುಣಗಳನ್ನು ಬೆಳೆಸುತ್ತವೆ. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸಮರ್ಪಕ ಯೋಜನೆ ಹಾಗೂ ಒಗ್ಗಟ್ಟಿನೊಂದಿಗೆ ಆಟವಾಡಿದಾಗ ಮಾತ್ರ ಯಶಸ್ಸು ಸಾಧ್ಯವೆಂದು’ ಹೇಳಿದರು.</p>.<p>ಪ್ರಾಂಶುಪಾಲ ಎ.ಐ.ಹಂಜಗಿ ಮಾತನಾಡಿ, ‘ಕ್ರೀಡಾಪಟುಗಳು ಸದಾ ಕ್ರೀಡಾ ಸ್ಪೂರ್ತಿಯಿಂದ ಆಡಬೇಕು. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯುತ್ತವೆ’ ಎಂದು ತಿಳಿಸಿದರು.</p>.<p>ಫೈನಲ್ ಪಂದ್ಯದಲ್ಲಿ ಆತಿಥೇಯ ಸರ್ಕಾರಿ ಪದವಿ ಕಾಲೇಜು, ವಿಜಯಪುರ ಮತ್ತು ಬಂಜಾರಾ ಪದವಿ ಕಾಲೇಜು ತಂಡಗಳ ನಡುವೆ ರೋಚಕ ಪೈಪೋಟಿ ನಡೆಯಿತು.</p>.<p>ಸಮಬಲದ ಹೋರಾಟದ ಬಳಿಕ ಬಂಜಾರಾ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು, ಆತಿಥೇಯ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು.</p>.<p>ಆಹೇರಿಯ ಸಂಜಯ ಜಾಧವ, ಐ.ಕ್ಯೂ.ಎ.ಸಿ ಸಂಚಾಲಕ ಪ್ರೊ. ಆರ್.ಎಸ್.ಕುರಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಕ್ರೀಡಾ ನಿರ್ದೇಶಕಿ ರೇಣುಕಾ ಅಂಬಲಿ, ಚಿದಾನಂದ ಆನೂರ, ಸುನೀಲ ತೋಂಟಾಪೂರ, ಪ್ರೊ. ಎಂ.ಎಸ್.ಖೊದ್ನಾಪೂರ, ಪ್ರೊ. ಸುನೀಲ ಹತ್ತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-883142247</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>