<p><strong>ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ `ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನ~ ನೀಡಲಾಗುತ್ತಿದ್ದು, ಕಳೆದ ಮಾರ್ಚ್ನಲ್ಲಿ ನಡೆದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. <br /> <br /> ಮೂರು ವರ್ಷಗಳಿಂದ ಈ ಯೋಜನೆ ಜಾರಿಯಲ್ಲಿದ್ದರೂ ಕರ್ನಾಟಕದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಇದರ ಲಾಭ ಪಡೆದುಕೊಳ್ಳುತ್ತಿಲ್ಲ ಎಂಬುದನ್ನು ಅಂಕಿಅಂಶಗಳು ತಿಳಿಸುತ್ತವೆ.<br /> </strong><br /> ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ `ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನ~ ನೀಡಲಾಗುತ್ತಿದ್ದು, ಕಳೆದ ಮಾರ್ಚ್ನಲ್ಲಿ ನಡೆದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ.<br /> <br /> ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ 2008ರಲ್ಲಿ ಈ ಯೋಜನೆಯನ್ನು ರೂಪಿಸಿದ್ದು, ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಬಹಳಷ್ಟು ಅನುಕೂಲವಾಗಿದೆ. <br /> <br /> ಪ್ರತಿ ವರ್ಷ ರಾಜ್ಯದ 4237 ವಿದ್ಯಾರ್ಥಿಗಳು ಈ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಪದವಿ/ಉನ್ನತ ಶಿಕ್ಷಣ ವ್ಯಾಸಂಗ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಷರತ್ತಿಗೆ ಒಳಪಟ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.<br /> <br /> ಬಿ.ಎ., ಬಿ.ಕಾಂ., ಬಿಎಸ್ಸಿ., ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಪಶುವೈದ್ಯಕೀಯ, ಕೃಷಿ ಸೇರಿದಂತೆ ಯಾವುದೇ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. <br /> <br /> ಐಟಿಐ, ಡಿಪ್ಲೊಮಾ, ಡಿಇಡಿ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರಲ್ಲ. ಕನಿಷ್ಠ ಮೂರು ವರ್ಷದ ಪದವಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮಾತ್ರ ಇದರ ಪ್ರಯೋಜನ ಸಿಗಲಿದೆ.<br /> <br /> ಮೂರು ವರ್ಷಗಳ ಹಿಂದೆಯೇ ಈ ಯೋಜನೆ ಜಾರಿಗೆ ಬಂದಿದ್ದರೂ ಇನ್ನೂ ಜನಪ್ರಿಯವಾಗಿಲ್ಲ ಎಂಬುದಕ್ಕೆ ಮೂರು ವರ್ಷಗಳಿಂದ ಕರ್ನಾಟಕದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಇದರ ಲಾಭ ಪಡೆದುಕೊಳ್ಳದೆ ಇರುವುದೇ ಸಾಕ್ಷಿ.<br /> <br /> 2008ರಲ್ಲಿ 3794, 2009ರಲ್ಲಿ 3564 ಹಾಗೂ 2010ರಲ್ಲಿ ಸುಮಾರು 3312 ವಿದ್ಯಾರ್ಥಿಗಳು ಮಾತ್ರ ಇದರ ಸದುಪಯೋಗ ಪಡೆದಿದ್ದಾರೆ. <br /> <br /> <strong>ಅಕ್ಟೋಬರ್ 25ರವರೆಗೆ ಸಮಯ</strong><br /> 2011ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಈಗ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 25ರವರೆಗೂ ಸಂಬಂಧಪಟ್ಟ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. <br /> <br /> ಒಂದು ವೇಳೆ ನಿಗದಿತ ದಿನಾಂಕದ ಒಳಗೆ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಲು ಆಗದೆ ಇದ್ದರೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಗೆ ಹೋಗಿ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. <br /> <br /> ಆದರೆ ಇದಕ್ಕೂ ಮುನ್ನ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ಅವರಿಂದ ದೃಢೀಕರಿಸಿರಬೇಕು.<br /> <br /> ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. <br /> <br /> ವೆಬ್ಸೈಟ್ನಲ್ಲಿ ಭರ್ತಿ ಮಾಡುವ ವಿಧಾನ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನೂ ನೀಡಲಾಗಿದೆ. ಸೂಚನೆಗಳನ್ನು ಸರಿಯಾಗಿ ಓದಿ, ನಂತರ ಭರ್ತಿ ಮಾಡಿದರೆ ತಪ್ಪುಗಳು ಆಗುವ ಸಾಧ್ಯತೆಗಳು ಇರುವುದಿಲ್ಲ .<br /> <br /> ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದವಿ ಹಂತದಲ್ಲಿ ವರ್ಷಕ್ಕೆ 10 ಸಾವಿರ ರೂಪಾಯಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿ ನೀಡಲಾಗುತ್ತದೆ. <br /> <br /> ಪ್ರತಿವರ್ಷ ವಿದ್ಯಾರ್ಥಿ ವೇತನವನ್ನು ನವೀಕರಿಸುವ ಪದ್ಧತಿ ಇದ್ದು, ಆಯಾ ವರ್ಷ ಶೇ 60ರಷ್ಟು ಅಂಕಗಳನ್ನು ಪಡೆಯುವುದಲ್ಲದೆ, ಶೇ 75ರಷ್ಟು ಹಾಜರಾತಿಯನ್ನು ಹೊಂದಿರಬೇಕು. ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನವನ್ನು ನವೀಕರಿಸಲಾಗುತ್ತದೆ.<br /> <br /> ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಪೋಷಕರ ಇಲ್ಲವೆ ತಂದೆ- ತಾಯಿ ಖಾತೆಗೆ ಜಮಾ ಮಾಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ವಿದ್ಯಾರ್ಥಿಯು ಎಸ್ಬಿಐ, ಎಸ್ಬಿಎಂ, ಎಸ್ಬಿಎಚ್, ವಿಜಯಾ ಬ್ಯಾಂಕ್, ಕೆನರಾ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿರಬೇಕು.<br /> <br /> 2011-12ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾಗಿರುವ ಕಾಲೇಜಿನ ಪ್ರಾಂಶುಪಾಲರಿಂದ ಸಹಿ ಮತ್ತು ಮೊಹರಿನ ದೃಢೀಕರಣದೊಂದಿಗೆ ಅರ್ಜಿ ಸಲ್ಲಿಸಬೇಕು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಿಂದ ಸಹಿ ಮಾಡಿಸಬಾರದು. <br /> <br /> ಪರಿಶಿಷ್ಟ ಜಾತಿ. ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅಂಗವಿಕಲರು ಸಂಬಂಧಿಸಿದ ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಸಾಮಾನ್ಯ ವರ್ಗ ಎಂದು ಪರಿಗಣಿಸಲಾಗುತ್ತದೆ.<br /> <br /> ವಿದ್ಯಾರ್ಥಿಯ ಪೋಷಕರ ವಾರ್ಷಿಕ ವರಮಾನ ರೂ. 4.50 ಲಕ್ಷ (ಕೇಂದ್ರ ಸರ್ಕಾರದ ನಿಯಮದಂತೆ) ಮೀರಬಾರದು. ಆದಾಯ ಪ್ರಮಾಣ ಪತ್ರ ಸಲ್ಲಿಸುವುದು ಎಲ್ಲ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿದೆ.<br /> <br /> ಆದಾಯ ಪ್ರಮಾಣ ಪತ್ರ ಇಲ್ಲದೆ ಇದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಕಲೆ, ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಬಹುದು. <br /> <br /> ಆದರೆ ಕಲಾ ವಿಭಾಗದಲ್ಲಿ ಸಾಕಷ್ಟು ಅರ್ಜಿಗಳು ಬರುತ್ತಿಲ್ಲ. ಇದರಿಂದಾಗಿ ಈ ವರ್ಷ ಕಲಾ ವಿಭಾಗದಲ್ಲಿ ಶೇ 70ಕ್ಕಿಂತ (ಕಳೆದ ವರ್ಷ ಶೇ 80ರಷ್ಟು ಅಂಕ ನಿಗದಿಪಡಿಸಲಾಗಿತ್ತು) ಹೆಚ್ಚು ಅಂಕ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. <br /> <br /> ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಗಳಿಸಿರಬೇಕಾದ ಅಂಕಗಳ ಪ್ರಮಾಣ ಜಾಸ್ತಿ ಇದ್ದು, ಪಟ್ಟಿಯಲ್ಲಿ ವಿವರಗಳನ್ನು ನೀಡಲಾಗಿದೆ. <br /> <br /> ವಿದ್ಯಾರ್ಥಿಗಳಿಗೆ ಸೂಚನೆಗಳು....<br /> ಬ್ಯಾಂಕ್ ಖಾತೆಯು 11ರಿಂದ 16 ಸಂಖ್ಯೆಗಳನ್ನು ಹೊಂದಿರಬೇಕು.<br /> <br /> ಬ್ಯಾಂಕ್ ಹೆಸರು, ಶಾಖೆ, ಶಾಖೆಯ ಕೋಡ್, ಐಎಫ್ಎಸ್ಸಿ ಕೋಡ್ (11 ಡಿಜಿಟ್) ಇತ್ಯಾದಿಗಳನ್ನು ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ದೃಢಪಡಿಸಿಕೊಂಡು ತುಂಬಬೇಕು. ಅಂಕಿ ಸಂಖ್ಯೆಗಳು ವ್ಯತ್ಯಾಸವಾದರೆ ವಿದ್ಯಾರ್ಥಿ ವೇತನವನ್ನು ವರ್ಗಾಯಿಸಲು ಸಾಧ್ಯವಾಗುವುದಿಲ್ಲ.<br /> <br /> ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿದ ನಂತರ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳ ಮೂಲಕ ನಿಗದಿತ ಸ್ಥಳದಲ್ಲಿ ಸಹಿ, ಮೊಹರು ಮಾಡಿಸಬೇಕು.<br /> <br /> ಬೇರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಸಹಿ ಮಾಡಬೇಕು.<br /> <br /> ಅರ್ಜಿಯಲ್ಲಿ ಕೇಳಿರುವ ಎಲ್ಲ ಮಾಹಿತಿಯನ್ನು ವಿವರವಾಗಿ ನೀಡಬೇಕು.<br /> <br /> ದಾಖಲೆಗಳು ಅಪೂರ್ಣವಾಗಿದ್ದರೆ ಅರ್ಜಿಯನ್ನು ತಿರಸ್ಕೃರಿಸಲಾಗುತ್ತದೆ. <br /> <br /> ಸೂಚನೆಗಳನ್ನು ಓದಿ ಅರ್ಥ ಮಾಡಿಕೊಂಡ ನಂತರ ಅರ್ಜಿಯನ್ನು ಭರ್ತಿ ಮಾಡುವುದು.<br /> <br /> ಭಾವಚಿತ್ರ ಅಂಟಿಸುವುದರ ಜೊತೆಗೆ ಎಲ್ಲ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ.<br /> <br /> ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವೆಬ್ಸೈಟ್ ವಿಳಾಸ: www.puc.kar.nic.in<br /> <br /> <strong>ಕಚೇರಿ ವಿಳಾಸ:</strong> ಲೆಕ್ಕಪತ್ರಾಧಿಕಾರಿ, ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, <strong>18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-12<br /> ದೂರವಾಣಿ</strong> : 080-23361856/857/858</p>.<p><strong>ಪಿಯುಸಿಯಲ್ಲಿ ಒಟ್ಟು 600 ಅಂಕಗಳಿಗೆ ಸಂಯೋಜನೆ, ಪ್ರವರ್ಗವಾರು ವಿದ್ಯಾರ್ಥಿಗಳು ಗಳಿಸಿರಬೇಕಾದ ಕನಿಷ್ಠ ಅಂಕಗಳ ವಿವರ</strong><br /> ಪ್ರವರ್ಗ ವಿಜ್ಞಾನ ವಾಣಿಜ್ಯ ಕಲೆ<br /> ಬಾಲಕರು ಬಾಲಕಿಯರು ಬಾಲಕರು ಬಾಲಕಿಯರು ಬಾಲಕರು ಬಾಲಕಿಯರು<br /> ಎಸ್ಸಿ 474 474 445 445 423 423<br /> ಎಸ್ಟಿ 474 474 445 445 423 423<br /> ಒಬಿಸಿ 508 508 466 466 423 423<br /> ಜಿಎಂ 508 508 466 466 423 423<br /> <br /> <br /> <br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ `ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನ~ ನೀಡಲಾಗುತ್ತಿದ್ದು, ಕಳೆದ ಮಾರ್ಚ್ನಲ್ಲಿ ನಡೆದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ. <br /> <br /> ಮೂರು ವರ್ಷಗಳಿಂದ ಈ ಯೋಜನೆ ಜಾರಿಯಲ್ಲಿದ್ದರೂ ಕರ್ನಾಟಕದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಇದರ ಲಾಭ ಪಡೆದುಕೊಳ್ಳುತ್ತಿಲ್ಲ ಎಂಬುದನ್ನು ಅಂಕಿಅಂಶಗಳು ತಿಳಿಸುತ್ತವೆ.<br /> </strong><br /> ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ `ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನ~ ನೀಡಲಾಗುತ್ತಿದ್ದು, ಕಳೆದ ಮಾರ್ಚ್ನಲ್ಲಿ ನಡೆದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ.<br /> <br /> ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ 2008ರಲ್ಲಿ ಈ ಯೋಜನೆಯನ್ನು ರೂಪಿಸಿದ್ದು, ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಬಹಳಷ್ಟು ಅನುಕೂಲವಾಗಿದೆ. <br /> <br /> ಪ್ರತಿ ವರ್ಷ ರಾಜ್ಯದ 4237 ವಿದ್ಯಾರ್ಥಿಗಳು ಈ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಪದವಿ/ಉನ್ನತ ಶಿಕ್ಷಣ ವ್ಯಾಸಂಗ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಷರತ್ತಿಗೆ ಒಳಪಟ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.<br /> <br /> ಬಿ.ಎ., ಬಿ.ಕಾಂ., ಬಿಎಸ್ಸಿ., ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಪಶುವೈದ್ಯಕೀಯ, ಕೃಷಿ ಸೇರಿದಂತೆ ಯಾವುದೇ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. <br /> <br /> ಐಟಿಐ, ಡಿಪ್ಲೊಮಾ, ಡಿಇಡಿ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರಲ್ಲ. ಕನಿಷ್ಠ ಮೂರು ವರ್ಷದ ಪದವಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮಾತ್ರ ಇದರ ಪ್ರಯೋಜನ ಸಿಗಲಿದೆ.<br /> <br /> ಮೂರು ವರ್ಷಗಳ ಹಿಂದೆಯೇ ಈ ಯೋಜನೆ ಜಾರಿಗೆ ಬಂದಿದ್ದರೂ ಇನ್ನೂ ಜನಪ್ರಿಯವಾಗಿಲ್ಲ ಎಂಬುದಕ್ಕೆ ಮೂರು ವರ್ಷಗಳಿಂದ ಕರ್ನಾಟಕದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಇದರ ಲಾಭ ಪಡೆದುಕೊಳ್ಳದೆ ಇರುವುದೇ ಸಾಕ್ಷಿ.<br /> <br /> 2008ರಲ್ಲಿ 3794, 2009ರಲ್ಲಿ 3564 ಹಾಗೂ 2010ರಲ್ಲಿ ಸುಮಾರು 3312 ವಿದ್ಯಾರ್ಥಿಗಳು ಮಾತ್ರ ಇದರ ಸದುಪಯೋಗ ಪಡೆದಿದ್ದಾರೆ. <br /> <br /> <strong>ಅಕ್ಟೋಬರ್ 25ರವರೆಗೆ ಸಮಯ</strong><br /> 2011ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಈಗ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 25ರವರೆಗೂ ಸಂಬಂಧಪಟ್ಟ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. <br /> <br /> ಒಂದು ವೇಳೆ ನಿಗದಿತ ದಿನಾಂಕದ ಒಳಗೆ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಲು ಆಗದೆ ಇದ್ದರೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಗೆ ಹೋಗಿ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. <br /> <br /> ಆದರೆ ಇದಕ್ಕೂ ಮುನ್ನ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ಅವರಿಂದ ದೃಢೀಕರಿಸಿರಬೇಕು.<br /> <br /> ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. <br /> <br /> ವೆಬ್ಸೈಟ್ನಲ್ಲಿ ಭರ್ತಿ ಮಾಡುವ ವಿಧಾನ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನೂ ನೀಡಲಾಗಿದೆ. ಸೂಚನೆಗಳನ್ನು ಸರಿಯಾಗಿ ಓದಿ, ನಂತರ ಭರ್ತಿ ಮಾಡಿದರೆ ತಪ್ಪುಗಳು ಆಗುವ ಸಾಧ್ಯತೆಗಳು ಇರುವುದಿಲ್ಲ .<br /> <br /> ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದವಿ ಹಂತದಲ್ಲಿ ವರ್ಷಕ್ಕೆ 10 ಸಾವಿರ ರೂಪಾಯಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿ ನೀಡಲಾಗುತ್ತದೆ. <br /> <br /> ಪ್ರತಿವರ್ಷ ವಿದ್ಯಾರ್ಥಿ ವೇತನವನ್ನು ನವೀಕರಿಸುವ ಪದ್ಧತಿ ಇದ್ದು, ಆಯಾ ವರ್ಷ ಶೇ 60ರಷ್ಟು ಅಂಕಗಳನ್ನು ಪಡೆಯುವುದಲ್ಲದೆ, ಶೇ 75ರಷ್ಟು ಹಾಜರಾತಿಯನ್ನು ಹೊಂದಿರಬೇಕು. ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನವನ್ನು ನವೀಕರಿಸಲಾಗುತ್ತದೆ.<br /> <br /> ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಪೋಷಕರ ಇಲ್ಲವೆ ತಂದೆ- ತಾಯಿ ಖಾತೆಗೆ ಜಮಾ ಮಾಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ವಿದ್ಯಾರ್ಥಿಯು ಎಸ್ಬಿಐ, ಎಸ್ಬಿಎಂ, ಎಸ್ಬಿಎಚ್, ವಿಜಯಾ ಬ್ಯಾಂಕ್, ಕೆನರಾ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿರಬೇಕು.<br /> <br /> 2011-12ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾಗಿರುವ ಕಾಲೇಜಿನ ಪ್ರಾಂಶುಪಾಲರಿಂದ ಸಹಿ ಮತ್ತು ಮೊಹರಿನ ದೃಢೀಕರಣದೊಂದಿಗೆ ಅರ್ಜಿ ಸಲ್ಲಿಸಬೇಕು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಿಂದ ಸಹಿ ಮಾಡಿಸಬಾರದು. <br /> <br /> ಪರಿಶಿಷ್ಟ ಜಾತಿ. ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅಂಗವಿಕಲರು ಸಂಬಂಧಿಸಿದ ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಸಾಮಾನ್ಯ ವರ್ಗ ಎಂದು ಪರಿಗಣಿಸಲಾಗುತ್ತದೆ.<br /> <br /> ವಿದ್ಯಾರ್ಥಿಯ ಪೋಷಕರ ವಾರ್ಷಿಕ ವರಮಾನ ರೂ. 4.50 ಲಕ್ಷ (ಕೇಂದ್ರ ಸರ್ಕಾರದ ನಿಯಮದಂತೆ) ಮೀರಬಾರದು. ಆದಾಯ ಪ್ರಮಾಣ ಪತ್ರ ಸಲ್ಲಿಸುವುದು ಎಲ್ಲ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿದೆ.<br /> <br /> ಆದಾಯ ಪ್ರಮಾಣ ಪತ್ರ ಇಲ್ಲದೆ ಇದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಕಲೆ, ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಬಹುದು. <br /> <br /> ಆದರೆ ಕಲಾ ವಿಭಾಗದಲ್ಲಿ ಸಾಕಷ್ಟು ಅರ್ಜಿಗಳು ಬರುತ್ತಿಲ್ಲ. ಇದರಿಂದಾಗಿ ಈ ವರ್ಷ ಕಲಾ ವಿಭಾಗದಲ್ಲಿ ಶೇ 70ಕ್ಕಿಂತ (ಕಳೆದ ವರ್ಷ ಶೇ 80ರಷ್ಟು ಅಂಕ ನಿಗದಿಪಡಿಸಲಾಗಿತ್ತು) ಹೆಚ್ಚು ಅಂಕ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. <br /> <br /> ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಗಳಿಸಿರಬೇಕಾದ ಅಂಕಗಳ ಪ್ರಮಾಣ ಜಾಸ್ತಿ ಇದ್ದು, ಪಟ್ಟಿಯಲ್ಲಿ ವಿವರಗಳನ್ನು ನೀಡಲಾಗಿದೆ. <br /> <br /> ವಿದ್ಯಾರ್ಥಿಗಳಿಗೆ ಸೂಚನೆಗಳು....<br /> ಬ್ಯಾಂಕ್ ಖಾತೆಯು 11ರಿಂದ 16 ಸಂಖ್ಯೆಗಳನ್ನು ಹೊಂದಿರಬೇಕು.<br /> <br /> ಬ್ಯಾಂಕ್ ಹೆಸರು, ಶಾಖೆ, ಶಾಖೆಯ ಕೋಡ್, ಐಎಫ್ಎಸ್ಸಿ ಕೋಡ್ (11 ಡಿಜಿಟ್) ಇತ್ಯಾದಿಗಳನ್ನು ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ದೃಢಪಡಿಸಿಕೊಂಡು ತುಂಬಬೇಕು. ಅಂಕಿ ಸಂಖ್ಯೆಗಳು ವ್ಯತ್ಯಾಸವಾದರೆ ವಿದ್ಯಾರ್ಥಿ ವೇತನವನ್ನು ವರ್ಗಾಯಿಸಲು ಸಾಧ್ಯವಾಗುವುದಿಲ್ಲ.<br /> <br /> ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿದ ನಂತರ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳ ಮೂಲಕ ನಿಗದಿತ ಸ್ಥಳದಲ್ಲಿ ಸಹಿ, ಮೊಹರು ಮಾಡಿಸಬೇಕು.<br /> <br /> ಬೇರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಸಹಿ ಮಾಡಬೇಕು.<br /> <br /> ಅರ್ಜಿಯಲ್ಲಿ ಕೇಳಿರುವ ಎಲ್ಲ ಮಾಹಿತಿಯನ್ನು ವಿವರವಾಗಿ ನೀಡಬೇಕು.<br /> <br /> ದಾಖಲೆಗಳು ಅಪೂರ್ಣವಾಗಿದ್ದರೆ ಅರ್ಜಿಯನ್ನು ತಿರಸ್ಕೃರಿಸಲಾಗುತ್ತದೆ. <br /> <br /> ಸೂಚನೆಗಳನ್ನು ಓದಿ ಅರ್ಥ ಮಾಡಿಕೊಂಡ ನಂತರ ಅರ್ಜಿಯನ್ನು ಭರ್ತಿ ಮಾಡುವುದು.<br /> <br /> ಭಾವಚಿತ್ರ ಅಂಟಿಸುವುದರ ಜೊತೆಗೆ ಎಲ್ಲ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ.<br /> <br /> ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವೆಬ್ಸೈಟ್ ವಿಳಾಸ: www.puc.kar.nic.in<br /> <br /> <strong>ಕಚೇರಿ ವಿಳಾಸ:</strong> ಲೆಕ್ಕಪತ್ರಾಧಿಕಾರಿ, ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, <strong>18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-12<br /> ದೂರವಾಣಿ</strong> : 080-23361856/857/858</p>.<p><strong>ಪಿಯುಸಿಯಲ್ಲಿ ಒಟ್ಟು 600 ಅಂಕಗಳಿಗೆ ಸಂಯೋಜನೆ, ಪ್ರವರ್ಗವಾರು ವಿದ್ಯಾರ್ಥಿಗಳು ಗಳಿಸಿರಬೇಕಾದ ಕನಿಷ್ಠ ಅಂಕಗಳ ವಿವರ</strong><br /> ಪ್ರವರ್ಗ ವಿಜ್ಞಾನ ವಾಣಿಜ್ಯ ಕಲೆ<br /> ಬಾಲಕರು ಬಾಲಕಿಯರು ಬಾಲಕರು ಬಾಲಕಿಯರು ಬಾಲಕರು ಬಾಲಕಿಯರು<br /> ಎಸ್ಸಿ 474 474 445 445 423 423<br /> ಎಸ್ಟಿ 474 474 445 445 423 423<br /> ಒಬಿಸಿ 508 508 466 466 423 423<br /> ಜಿಎಂ 508 508 466 466 423 423<br /> <br /> <br /> <br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>