ಸಭೆಯ ಬಳಿಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಮಣ್ಣೂರ, ‘ಪತ್ನಿಯ ಅಧಿಕಾರ ಪತಿ ಚಲಾಯಿಸುವುದು ತಪ್ಪು. ಆದರೆ, ಅವರೇ ಬಂದು ವೇದಿಕೆಯಲ್ಲಿ ಕುಳಿತುಕೊಂಡಿದ್ದಾರೆ. ಸಭೆಯಲ್ಲಿ ಇಬ್ಬರು ಶಾಸಕರಿದ್ದರು. ಹೀಗಾಗಿ, ನಾನು ಸೂಚನೆ ನೀಡುವುದು ಸರಿಯಲ್ಲ ಎಂದು ಸುಮ್ಮನಾದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದರು.