<p><strong>ಬೆಂಗಳೂರು</strong>: ಪ್ಯಾರಿಸ್ ಒಲಂಪಿಕ್ಸ್ಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ‘ಅಮೃತ ಕ್ರೀಡಾ ದತ್ತು ಯೋಜನೆ’ ಅಡಿಯಲ್ಲಿ ತರಬೇತಿ ನೀಡುವುದಕ್ಕಾಗಿ ಗಾಲ್ಫ್ ಪಟು ಅದಿತಿ ಅಶೋಕ್, ಈಕ್ವೇಸ್ಟ್ರಿಯನ್ ಪಟು ಫೌದಾ ಮಿರ್ಝಾ, ಈಜು ಪಟು ಶ್ರೀಹರಿ ನಟರಾಜ್ ಸೇರಿದಂತೆ 75 ಮಂದಿಯನ್ನು ಆಯ್ಕೆ ಮಾಡಲಾಗಿದೆ.</p>.<p>ಪ್ಯಾರಾ ಪವರ್ ಲಿಫ್ಟರ್ ಶಾಕೀನಾ ಖಟೂನ್, ಬ್ಯಾಡ್ಮಿಂಟನ್ ಪಟು ಅಶ್ವಿನಿ ಪೊನ್ನಪ್ಪ, ಅಥ್ಲೀಟ್ ಎಂ.ಆರ್. ಪೂವಮ್ಮ, ಪ್ಯಾರಾ ಈಜು ಪಟು ನಿರಂಜನ್ ಎಂ. ಹಾಕಿ ಆಟಗಾರ ಸುನೀಲ್ ಕೂಡ ಪಟ್ಟಿಯಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆರು ಮಂದಿ ಅಂಗವಿಕಲ ಕ್ರೀಡಾಪಟುಗಳಿಗೆ ಅವಕಾಶ ನೀಡಲಾಗಿದೆ. 20 ಕ್ರೀಡಾಪಟುಗಳ ಕಾಯ್ದಿರಿಸಿದ ಪಟ್ಟಿಯನ್ನೂ ಪ್ರಕಟಿಸಲಾಗಿದೆ.</p>.<p>ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಅಮೃತ ಕ್ರೀಡಾ ದತ್ತು ಯೋಜನೆ’ ಜಾರಿಗೊಳಿಸಲಾಗಿದೆ. ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಕೆ.ಸಿ. ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 28ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತರಬೇತಿಗಾಗಿ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿತ್ತು. ಶುಕ್ರವಾರ ಈ ಸಂಬಂಧ ಆದೇಶ ಹೊರಡಿಸಲಾಗಿದೆ.</p>.<p>ಒಬ್ಬ ಗಾಲ್ಫ್ ಪಟು, ಐವರು ಈಜು ಪಟುಗಳು, 12 ಮಂದಿ ಅಥ್ಲೀಟ್ಗಳು, ಎಂಟು ಮಂದಿ ಸೈಕ್ಲಿಸ್ಟ್ಗಳು, ಏಳು ಮಂದಿ ಬ್ಯಾಸ್ಕೆಟ್ ಬಾಲ್ ಪಟುಗಳು, ನಾಲ್ವರು ಕುಸ್ತಿ ಪಟುಗಳು, ಒಂಬತ್ತು ಮಂದಿ ಬ್ಯಾಡ್ಮಿಂಟನ್ ಪಟುಗಳು, ಐವರು ಹಾಕಿ ಪಟುಗಳು ಪಟ್ಟಿಯಲ್ಲಿದ್ದಾರೆ.</p>.<p>‘ತರಬೇತಿಗೆ ಆಯ್ಕೆಯಾದವರಿಗೆ ವಾರ್ಷಿಕ ₹ 5 ಲಕ್ಷ ನೆರವು ನೀಡಲಾಗುವುದು. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಖಾಸಗಿ ಕಂಪನಿಗಳಿಂದ ನೆರವು ದೊರಕಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. 150 ಕಂಪನಿಗಳಿಗೆ ಪತ್ರ ಬರೆದಿದ್ದು, 50 ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ’ ಎಂದು ನಾರಾಯಣ ಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ಯಾರಿಸ್ ಒಲಂಪಿಕ್ಸ್ಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ‘ಅಮೃತ ಕ್ರೀಡಾ ದತ್ತು ಯೋಜನೆ’ ಅಡಿಯಲ್ಲಿ ತರಬೇತಿ ನೀಡುವುದಕ್ಕಾಗಿ ಗಾಲ್ಫ್ ಪಟು ಅದಿತಿ ಅಶೋಕ್, ಈಕ್ವೇಸ್ಟ್ರಿಯನ್ ಪಟು ಫೌದಾ ಮಿರ್ಝಾ, ಈಜು ಪಟು ಶ್ರೀಹರಿ ನಟರಾಜ್ ಸೇರಿದಂತೆ 75 ಮಂದಿಯನ್ನು ಆಯ್ಕೆ ಮಾಡಲಾಗಿದೆ.</p>.<p>ಪ್ಯಾರಾ ಪವರ್ ಲಿಫ್ಟರ್ ಶಾಕೀನಾ ಖಟೂನ್, ಬ್ಯಾಡ್ಮಿಂಟನ್ ಪಟು ಅಶ್ವಿನಿ ಪೊನ್ನಪ್ಪ, ಅಥ್ಲೀಟ್ ಎಂ.ಆರ್. ಪೂವಮ್ಮ, ಪ್ಯಾರಾ ಈಜು ಪಟು ನಿರಂಜನ್ ಎಂ. ಹಾಕಿ ಆಟಗಾರ ಸುನೀಲ್ ಕೂಡ ಪಟ್ಟಿಯಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆರು ಮಂದಿ ಅಂಗವಿಕಲ ಕ್ರೀಡಾಪಟುಗಳಿಗೆ ಅವಕಾಶ ನೀಡಲಾಗಿದೆ. 20 ಕ್ರೀಡಾಪಟುಗಳ ಕಾಯ್ದಿರಿಸಿದ ಪಟ್ಟಿಯನ್ನೂ ಪ್ರಕಟಿಸಲಾಗಿದೆ.</p>.<p>ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಅಮೃತ ಕ್ರೀಡಾ ದತ್ತು ಯೋಜನೆ’ ಜಾರಿಗೊಳಿಸಲಾಗಿದೆ. ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಕೆ.ಸಿ. ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 28ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತರಬೇತಿಗಾಗಿ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿತ್ತು. ಶುಕ್ರವಾರ ಈ ಸಂಬಂಧ ಆದೇಶ ಹೊರಡಿಸಲಾಗಿದೆ.</p>.<p>ಒಬ್ಬ ಗಾಲ್ಫ್ ಪಟು, ಐವರು ಈಜು ಪಟುಗಳು, 12 ಮಂದಿ ಅಥ್ಲೀಟ್ಗಳು, ಎಂಟು ಮಂದಿ ಸೈಕ್ಲಿಸ್ಟ್ಗಳು, ಏಳು ಮಂದಿ ಬ್ಯಾಸ್ಕೆಟ್ ಬಾಲ್ ಪಟುಗಳು, ನಾಲ್ವರು ಕುಸ್ತಿ ಪಟುಗಳು, ಒಂಬತ್ತು ಮಂದಿ ಬ್ಯಾಡ್ಮಿಂಟನ್ ಪಟುಗಳು, ಐವರು ಹಾಕಿ ಪಟುಗಳು ಪಟ್ಟಿಯಲ್ಲಿದ್ದಾರೆ.</p>.<p>‘ತರಬೇತಿಗೆ ಆಯ್ಕೆಯಾದವರಿಗೆ ವಾರ್ಷಿಕ ₹ 5 ಲಕ್ಷ ನೆರವು ನೀಡಲಾಗುವುದು. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಖಾಸಗಿ ಕಂಪನಿಗಳಿಂದ ನೆರವು ದೊರಕಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. 150 ಕಂಪನಿಗಳಿಗೆ ಪತ್ರ ಬರೆದಿದ್ದು, 50 ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ’ ಎಂದು ನಾರಾಯಣ ಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>