ಬೆಳಗಾವಿ: ಬಿಜೆಪಿ ಅಧಿಕಾರಕ್ಕೆ ಬಂದರೆ 6 ತಿಂಗಳಿನಲ್ಲಿ ಮಹಾದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಂಹಕಾರದಿಂದ ಮಹದಾಯಿ ಸಮಸ್ಯೆ ಬಗೆಹರಿದಿಲ್ಲ ಎನ್ನುತ್ತಾರೆ ಅಮಿತ್ ಶಾ ಹೇಳಿದರು.
ನಾವು ಅಧಿಕಾರಕ್ಕೆ ಬಂದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇವೆ. ಅವರು ಪಾತಾಳದಲ್ಲಿ ಅಡಗಿದ್ದರು ಅವರನ್ನು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದರು.