<p><strong>ನವದೆಹಲಿ:</strong> ಈ ವರ್ಷದ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿರುವ ಬ್ಯಾಡ್ಮಿಂಟನ್ ಪಟು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ ಕೋವಿಡ್ –19 ಸೋಂಕು ತಗುಲಿರುವುದು ಖಚಿತವಾಗಿದೆ.</p>.<p>ಅವರನ್ನು ಕಳೆದ ಒಂದು ವಾರದಿಂದ ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ. 20 ವರ್ಷದ ಡಬಲ್ಸ್ ಆಟಗಾರ ಸಾತ್ವಿಕ್ ಅವರಿಗೆ ಲಕ್ಷಣರಹಿತ ಸೋಂಕು ತಗುಲಿದೆ. ಹೋದ ಶನಿವಾರ ಪ್ರಕಟವಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಪಟ್ಟಿಯಲ್ಲಿ ಬ್ಯಾಡ್ಮಿಂಟನ್ ವಿಭಾಗದ ಅರ್ಜುನ ಪ್ರಶಸ್ತಿ ಸಾಲಿನಲ್ಲಿ ಸಾತ್ವಿಕ್ ಇದ್ದರು.</p>.<p>’ಹೌದು ಇದು ನಿಜಸಂಗತಿ. ಹೋದ ವಾರ ಆ್ಯಂಟಿಜೆನ್ ಟೆಸ್ಟ್ ಮಾಡಿಸಿಕೊಂಡಾಗ ಸೋಂಕು ಇರುವುದು ತಿಳಿದಿತ್ತು. ಐದು ದಿನಗಳಿಂದ ಪ್ರತ್ಯೇಕವಾಸದಲ್ಲಿದ್ದೇನೆ. ಆರ್ಟಿ–ಪಿಸಿಆರ್ ಟೆಸ್ಟ್ ನಲ್ಲಿಯೂ ಸೋಂಕು ಖಚಿತಪಟ್ಟಿದೆ ‘ ಎಂದು ಸಾತ್ವಿಕ್ ಹೇಳಿದ್ದಾರೆ .</p>.<p>ಹೈದರಾಬಾದ್ ಸಮೀಪದ ಅಮಲಾಪುರಂನಲ್ಲಿರುವ ತಮ್ಮ ಮನೆಯಲ್ಲಿಯೇ ಅವರು ಕ್ವಾರಂಟೈನ್ ಆಗಿದ್ದಾರೆ.</p>.<p>’ನಾನು ಔಷಧೋಪಚಾರ ಪಡೆಯುತ್ತಿದ್ದೇನೆ. ಇಲ್ಲಿಯವರೆಗೆ ಯಾವುದೇ ಲಕ್ಷಣಗಳೂ ಕಂಡುಬಂದಿಲ್ಲ. ನನ್ನ ಪಾಲಕರು ಮತ್ತು ಸ್ನೇಹಿತರಲ್ಲಿಯೂ ವೈರಸ್ ಸೋಂಕು ಕಂಡುಬಂದಿಲ್ಲ. ಆದರೂ ನನಗೆ ಎಲ್ಲಿಂದ ಸೋಂಕು ತಗುಲಿತು ಎಂಬುದು ತಿಳಿಯುತ್ತಿಲ್ಲ‘ ಎಂದು ಹೇಳಿದ್ದಾರೆ.</p>.<p>ಅರ್ಜುನ ಮತ್ತು ಇತರ ರಾಷ್ಟ್ರೀಯ ಪುರಸ್ಕಾರಗಳ ಪ್ರದಾನ ಸಮಾರಂಭವನ್ನು ಈ ಬಾರಿ ಆನ್ಲೈನ್ (ವರ್ಚುವಲ್) ವೇದಿಕೆಯಲ್ಲಿ ನಡೆಸಲಾಗುತ್ತಿದೆ. ಶನಿವಾರ ಕಾರ್ಯಕ್ರಮ ನಡೆಯುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈ ವರ್ಷದ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿರುವ ಬ್ಯಾಡ್ಮಿಂಟನ್ ಪಟು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ ಕೋವಿಡ್ –19 ಸೋಂಕು ತಗುಲಿರುವುದು ಖಚಿತವಾಗಿದೆ.</p>.<p>ಅವರನ್ನು ಕಳೆದ ಒಂದು ವಾರದಿಂದ ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ. 20 ವರ್ಷದ ಡಬಲ್ಸ್ ಆಟಗಾರ ಸಾತ್ವಿಕ್ ಅವರಿಗೆ ಲಕ್ಷಣರಹಿತ ಸೋಂಕು ತಗುಲಿದೆ. ಹೋದ ಶನಿವಾರ ಪ್ರಕಟವಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಪಟ್ಟಿಯಲ್ಲಿ ಬ್ಯಾಡ್ಮಿಂಟನ್ ವಿಭಾಗದ ಅರ್ಜುನ ಪ್ರಶಸ್ತಿ ಸಾಲಿನಲ್ಲಿ ಸಾತ್ವಿಕ್ ಇದ್ದರು.</p>.<p>’ಹೌದು ಇದು ನಿಜಸಂಗತಿ. ಹೋದ ವಾರ ಆ್ಯಂಟಿಜೆನ್ ಟೆಸ್ಟ್ ಮಾಡಿಸಿಕೊಂಡಾಗ ಸೋಂಕು ಇರುವುದು ತಿಳಿದಿತ್ತು. ಐದು ದಿನಗಳಿಂದ ಪ್ರತ್ಯೇಕವಾಸದಲ್ಲಿದ್ದೇನೆ. ಆರ್ಟಿ–ಪಿಸಿಆರ್ ಟೆಸ್ಟ್ ನಲ್ಲಿಯೂ ಸೋಂಕು ಖಚಿತಪಟ್ಟಿದೆ ‘ ಎಂದು ಸಾತ್ವಿಕ್ ಹೇಳಿದ್ದಾರೆ .</p>.<p>ಹೈದರಾಬಾದ್ ಸಮೀಪದ ಅಮಲಾಪುರಂನಲ್ಲಿರುವ ತಮ್ಮ ಮನೆಯಲ್ಲಿಯೇ ಅವರು ಕ್ವಾರಂಟೈನ್ ಆಗಿದ್ದಾರೆ.</p>.<p>’ನಾನು ಔಷಧೋಪಚಾರ ಪಡೆಯುತ್ತಿದ್ದೇನೆ. ಇಲ್ಲಿಯವರೆಗೆ ಯಾವುದೇ ಲಕ್ಷಣಗಳೂ ಕಂಡುಬಂದಿಲ್ಲ. ನನ್ನ ಪಾಲಕರು ಮತ್ತು ಸ್ನೇಹಿತರಲ್ಲಿಯೂ ವೈರಸ್ ಸೋಂಕು ಕಂಡುಬಂದಿಲ್ಲ. ಆದರೂ ನನಗೆ ಎಲ್ಲಿಂದ ಸೋಂಕು ತಗುಲಿತು ಎಂಬುದು ತಿಳಿಯುತ್ತಿಲ್ಲ‘ ಎಂದು ಹೇಳಿದ್ದಾರೆ.</p>.<p>ಅರ್ಜುನ ಮತ್ತು ಇತರ ರಾಷ್ಟ್ರೀಯ ಪುರಸ್ಕಾರಗಳ ಪ್ರದಾನ ಸಮಾರಂಭವನ್ನು ಈ ಬಾರಿ ಆನ್ಲೈನ್ (ವರ್ಚುವಲ್) ವೇದಿಕೆಯಲ್ಲಿ ನಡೆಸಲಾಗುತ್ತಿದೆ. ಶನಿವಾರ ಕಾರ್ಯಕ್ರಮ ನಡೆಯುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>