ಹ್ಯಾರಡ ಸುತ್ತಮುತ್ತಲ ಗ್ರಾಮಗಳಲ್ಲಿ ಮೇಲಿಂದ ಮೇಲೆ ಕುರಿ, ಜಾನುವಾರು ಮತ್ತು ನಾಯಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು. ಗ್ರಾಮಸ್ಥರ ಮನವಿ ಮೇರೆಗೆ ಈಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಲಿಯಮ್ಮ ಕೆರೆಯ ಬಳಿ ಆಯಕಟ್ಟಿನ ಸ್ಥಳದಲ್ಲಿ ಬೋನು ಇರಿಸಿದ್ದರು. ಆಹಾರ ಅರಸಿ ಬೋನಿನ ಬಳಿ ಬಂದಿದ್ದ ಚಿರತೆ ಸೋಮವಾರ ಸೆರೆಯಾಗಿದೆ.