ದಾವಣಗೆರೆ: ಇವರು ಸುಭಾನ್ ಖಾನ್. ಈಗ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ. 1995ರಲ್ಲಿ ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಜೆ.ಎಚ್. ಪಟೇಲರ ವಿರುದ್ಧ ಸ್ಪರ್ಧೆ ಮಾಡಿದಾಗ ರಾಜ್ಯದಾದ್ಯಂತ ಸುದ್ದಿಯಾಗಿದ್ದರು. ಈಗ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ವಿರುದ್ಧ ಸ್ಪರ್ಧಿಸಿದ್ದಾರೆ. 2014ರ ಲೋಕಸಭೆಯ ಚುನಾವಣಾ ಕಣದಲ್ಲೂ ಕಾಣಿಸಿಕೊಂಡಿದ್ದರು.