ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರ ಗ್ರಾಮದಲ್ಲಿ ಗುರುವಾರ ಪ್ರಚಾರ ಭಾಷಣ ಮಾಡಿದ ಅವರು, ‘ಕ್ಷೇತ್ರದಲ್ಲಿ ಗೂಂಡಾಗಿರಿ ಹಾಗೂ ಭ್ರಷ್ಟಾಚಾರ ನಡೆಸುತ್ತಿರುವ ವಿನಯ ಕುಲಕರ್ಣಿಗೆ ಇನ್ನು 30 ದಿನಗಳು ಬಾಕಿ ಉಳಿದಿವೆ. ಹಣಬಲ, ತೋಳ್ಬಲ, ಜಾತಿ ಹಾಗೂ ಧರ್ಮ ಒಡೆದು ರಾಜಕಾರಣ ಮಾಡುತ್ತಿರುವ ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.