‘ಕೆಲ ನಿಯಮಗಳಲ್ಲಿ ತಿದ್ದುಪಡಿಗೆ ಸೂಚಿಸಿ ನಾಲ್ಕು ತಿಂಗಳ ಗಡುವು ನೀಡಲಾಗಿತ್ತು. ಜುಲೈ 4ರ ಒಳಗಾಗಿ ನಿಯಮದಲ್ಲಿ ಬದಲಾವಣೆ ತರುವ ಬದಲು, ಕೆಬಿಎ ಹೆಸರಿನಲ್ಲಿ ಮತ್ತೊಂದು ಸಂಸ್ಥೆ ರಚಿಸುವುದಾಗಿ ನೀವು ಇ–ಮೇಲ್ನಲ್ಲಿ ತಿಳಿಸಿದ್ದೀರಿ. ಇದು ಬಿಎಐ ನಿಯಮಗಳಿಗೆ ವಿರುದ್ಧವಾಗಿರುವ ಕಾರಣ ಮಾನ್ಯತೆ ರದ್ದುಗೊಳಿಸಲಾಗಿದೆ. ನಿಯಮಗಳಲ್ಲಿ ತಿದ್ದುಪಡಿ ತಂದು ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಮಾನ್ಯತೆ ವಾಪಸ್ ನೀಡಲಾಗುವುದು’ ಎಂದು ಬಿಎಐ ಕಾರ್ಯದರ್ಶಿ ಸಂಜಯ್ ಮಿಶ್ರಾ, ಕೆಬಿಎ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.