ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ಸಿಎ ಹಂಗಾಮಿ ಅಧ್ಯಕ್ಷ ಸಂಜಯ್ ದೇಸಾಯಿ, ‘ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭೆಗಳನ್ನು ಗುರುತಿಸಿ ತರಬೇತಿ ನೀಡುವ ಯೋಜನೆಯನ್ನು ಚಂದ್ರಶೇಖರ್ ರೂಪಿಸಿದ್ದಾರೆ. ದಿಗ್ಗಜ ಬ್ಯಾಟ್ಸ್ಮನ್ ಜಿ.ಆರ್. ವಿಶ್ವನಾಥ್ ಕೂಡ ಈ ಯೋಜನೆಗೆ ಕೈಜೋಡಿಸಿದ್ದಾರೆ. ನಮ್ಮ ಸಂಸ್ಥೆಯಿಂದ ಎಲ್ಲ ಸಹಕಾರವನ್ನೂ ನೀಡುತ್ತಿದ್ದೇವೆ’ ಎಂದರು.