<p><strong>ಬೆಂಗಳೂರು: </strong>ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಸರ್ಕಾರದ ವತಿಯಿಂದ ತಲಾ ₹ 10 ಲಕ್ಷ ಪ್ರೋತ್ಸಾಹಧನ ವಿತರಿಸಿ, ಶುಭ ಹಾರೈಸಿದರು.</p>.<p>ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಮಾತನಾಡಿದ ಅವರು, ‘ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುತ್ತಿರುವವರಲ್ಲಿ ರಾಜ್ಯದ ಈಜುಪಟು ಶ್ರೀಹರಿ ನಟರಾಜ್, ಇಕ್ವೆಸ್ಟ್ರಿಯನ್ ಪಟುಫವಾದ್ ಮಿರ್ಜಾ ಮತ್ತು ಗಾಲ್ಫ್ ಆಟಗಾರ್ತಿಅದಿತಿ ಅಶೋಕ್ ಇದ್ದಾರೆ’ ಎಂದರು.</p>.<p>‘ಮಂಡ್ಯ ನಗರದಲ್ಲಿರುವ ಕ್ರೀಡಾಂಗಣವನ್ನು ₹ 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿ, ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ನಡೆಸಲು ಅನುಕೂಲವಾಗುವಂತೆ ದೇವನಹಳ್ಳಿಯಲ್ಲಿ ಫುಟ್ಬಾಲ್, ಹಾಕಿ, ಶೂಟಿಂಗ್, ಈಜು, ಟೆನ್ನಿಸ್ ಕ್ರೀಡೆಗಳ ಅಂತರರಾಷ್ಟ್ರೀಯ ಮಟ್ಟದ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.</p>.<p>‘ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ₹ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಆರಂಭಿಸಲಾಗುವುದು’ ಎಂದು ಅವರು ವಿವರಿಸಿದರು.</p>.<p>ಈಜು ಪಟು ಶ್ರೀಹರಿ ನಟರಾಜ್ ಮತ್ತು ಅವರ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಸರ್ಕಾರದ ವತಿಯಿಂದ ತಲಾ ₹ 10 ಲಕ್ಷ ಪ್ರೋತ್ಸಾಹಧನ ವಿತರಿಸಿ, ಶುಭ ಹಾರೈಸಿದರು.</p>.<p>ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಮಾತನಾಡಿದ ಅವರು, ‘ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುತ್ತಿರುವವರಲ್ಲಿ ರಾಜ್ಯದ ಈಜುಪಟು ಶ್ರೀಹರಿ ನಟರಾಜ್, ಇಕ್ವೆಸ್ಟ್ರಿಯನ್ ಪಟುಫವಾದ್ ಮಿರ್ಜಾ ಮತ್ತು ಗಾಲ್ಫ್ ಆಟಗಾರ್ತಿಅದಿತಿ ಅಶೋಕ್ ಇದ್ದಾರೆ’ ಎಂದರು.</p>.<p>‘ಮಂಡ್ಯ ನಗರದಲ್ಲಿರುವ ಕ್ರೀಡಾಂಗಣವನ್ನು ₹ 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿ, ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ನಡೆಸಲು ಅನುಕೂಲವಾಗುವಂತೆ ದೇವನಹಳ್ಳಿಯಲ್ಲಿ ಫುಟ್ಬಾಲ್, ಹಾಕಿ, ಶೂಟಿಂಗ್, ಈಜು, ಟೆನ್ನಿಸ್ ಕ್ರೀಡೆಗಳ ಅಂತರರಾಷ್ಟ್ರೀಯ ಮಟ್ಟದ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.</p>.<p>‘ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ₹ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಆರಂಭಿಸಲಾಗುವುದು’ ಎಂದು ಅವರು ವಿವರಿಸಿದರು.</p>.<p>ಈಜು ಪಟು ಶ್ರೀಹರಿ ನಟರಾಜ್ ಮತ್ತು ಅವರ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>