ನಾಯಕ ಮನ್ಪ್ರೀತ್ ಸಿಂಗ್ ಅವರೊಂದಿಗೆ ಸುರೇಂದರ್ ಕುಮಾರ್, ಜಸ್ಕರಣ್ ಸಿಂಗ್, ಡ್ರ್ಯಾಗ್ ಫ್ಲಿಕ್ಕರ್ ವರುಣ್ ಕುಮಾರ್ ಮತ್ತು ಗೋಲ್ಕೀಪರ್ ಕೃಷ್ಣ ಬಹದ್ದೂರ್ ಪಾಠಕ್ ಅವರಲ್ಲಿ ಕಳೆದ ವಾರ ಸೋಂಕು ಕಾಣಿಸಿಕೊಂಡಿತ್ತು. ಫಾರ್ವರ್ಡ್ ಆಟಗಾರ್ ಮನ್ದೀಪ್ ಸಿಂಗ್ ಅವರಲ್ಲಿ ಸೋಮವಾರ ಸೋಂಕು ದೃಢವಾಗಿತ್ತು. ಆಟಗಾರರೆಲ್ಲರೂ ದೇಶದ ವಿವಿಧ ರಾಜ್ಯಗಳಲ್ಲಿರುವ ಅವರವರ ಊರಿಂದ ಬೆಂಗಳೂರಿಗೆ ತೆರಳಿದ್ದರು. ಇದೇ ತಿಂಗಳ 20ರಂದು ರಾಷ್ಟ್ರೀಯ ಶಿಬಿರ ಬೆಂಗಳೂರಿನಲ್ಲಿ ಆರಂಭವಾಗಬೇಕಿತ್ತು.