ಚೆನ್ನೈ (ಪಿಟಿಐ): ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ತಮಿಳುನಾಡಿನ ಬ್ಯಾಟರ್ ಮುರಳಿ ವಿಜಯ್ ಅವರು ಗಾಲ್ಫ್ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಮಂಗಳವಾರ ಇಲ್ಲಿ ಆರಂಭವಾಗಲಿರುವ ಚೆನ್ನೈ ಓಪನ್ ಗಾಲ್ಫ್ ಚಾಂಪಿಯನ್ಷಿಪ್ನಲ್ಲಿ ಅಮೆಚೂರ್ ಆಟಗಾರನಾಗಿ ಅವರು ಕಣಕ್ಕಿಳಿಯಲಿದ್ದಾರೆ. ಹಿರಿಯ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಪುತ್ರ ಅನಿರುದ್ಧ ಶ್ರೀಕಾಂತ್ ಅವರೂ ಅಮೆಚೂರ್ ಸ್ಪರ್ಧಿಯಾಗಿ ಪಾಲ್ಗೊಳ್ಳಲಿದ್ದಾರೆ.
ತಮಿಳುನಾಡು ಗಾಲ್ಫ್ ಫೆಡರೇಷನ್ ಕೋರ್ಸ್ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ 123 ವೃತ್ತಿಪರ ಆಟಗಾರರು ಮತ್ತು ಮೂವರು ಅಮೆಚೂರ್ ಸ್ಪರ್ಧಿಗಳು ಕಣದಲ್ಲಿದ್ದಾರೆ.