ಛತ್ರಸಾಲ್ ಕ್ರೀಡಾಂಗಣದಲ್ಲಿ ಮೇ 4ರ ತಡರಾತ್ರಿ ಕುಸ್ತಿಪಟು ಸಾಗರ್ ರಾಣಾ ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಸಾಗರ್ ಮೃತಪಟ್ಟರು. ಮಾಡೆಲ್ ಟೌನ್ ಪ್ರದೇಶದಲ್ಲಿ ಆಸ್ತಿ ವಿಚಾರಕ್ಕಾಗಿ ಸುಶೀಲ್ ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸುಶೀಲ್ ಮತ್ತು ಅವರ ಸ್ನೇಹಿತ ಅಜಯ್ ಅವರನ್ನು ಕಳೆದ ಭಾನುವಾರ ದೆಹಲಿ ಹೊರವಲಯದ ಮುಂಡ್ಕಾ ಪ್ರದೇಶದಲ್ಲಿ ದೆಹಲಿ ಪೊಲೀಸ್ ವಿಶೇಷ ಪಡೆ ಬಂಧಿಸಿತ್ತು.