<p><strong>ಕೋಲಾರ:</strong> ‘ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಜಯಗಳಿಸಲು ಸಹಕಾರಿಯಾಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>ನಗರದಲ್ಲಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯಿಂದ ಶನಿವಾರ ಆರಂಭವಾದ ರಾಜ್ಯಮಟ್ಟದ ಪುರುಷ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಸೀನಿಯರ್ ಲೀಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ‘ಪಂದ್ಯಾವಳಿ ಏರ್ಪಡಿಸಿರುವುದು ಅತ್ಯಂತ ಸಂತೋಷದ ಸಂಗತಿ’ ಎಂದರು.</p>.<p>‘ಹಿಂದೆ ಕ್ರೀಡಾಕೂಟಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು, ಬದಲಾದ ಪರಿಸ್ಥಿಯಿಂದಾಗಿ ಯುವಕರು ಕ್ರೀಡೆಗಳಿಗೆ ಹೆಚ್ಚು ಗಮನಹರಿಸುತ್ತಿಲ್ಲ. ಯುವಕರು ಹೆಚ್ಚಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯ ಸಮಾಜ ನಿರ್ಮಾಣದಲ್ಲಿ ತೊಗಡಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡರೆ ಗುರಿ ಸಾಧನೆಯೇನು ಕಷ್ಟವೆನಿಸುವುದಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, ‘ದೈಹಿಕ ಹಾಗೂ ಮಾನಸಿಕ ರೋಗಗಳನ್ನು ತಡೆಗಟ್ಟಲು ಕ್ರೀಡೆಗಳು ಸಹಕಾರಿ’. ‘ನಾವು ದೈಹಿಕವಾಗಿ ಆರೋಗ್ಯದಿಂದಿರಲು ಕ್ರೀಡೆ ಅತಿ ಮುಖ್ಯವಾಗಿದೆ. ಶಾಲಾ ಕಾಲೇಜುಗಳ ದಿನದಲ್ಲಿ ಓದುವ ಜತೆಗೆ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವುದು ಉತ್ತಮ’ ಎಂದರು.</p>.<p>ವಿವಿಧ ಜಿಲ್ಲೆಗಳಿಂದ ಒಟ್ಟು 40 ತಂಡಗಳು ಭಾಗವಹಿಸಿದದು, ಆ ಪೂಕಿ 16 ಬಾಲಕಿಯರ ಮತ್ತು 24 ಬಾಲಕರ ತಂಡಗಳು ಭಾಗವಹಿಸಿವೆ.ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಜಯಗಳಿಸಲು ಸಹಕಾರಿಯಾಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>ನಗರದಲ್ಲಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯಿಂದ ಶನಿವಾರ ಆರಂಭವಾದ ರಾಜ್ಯಮಟ್ಟದ ಪುರುಷ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಸೀನಿಯರ್ ಲೀಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ‘ಪಂದ್ಯಾವಳಿ ಏರ್ಪಡಿಸಿರುವುದು ಅತ್ಯಂತ ಸಂತೋಷದ ಸಂಗತಿ’ ಎಂದರು.</p>.<p>‘ಹಿಂದೆ ಕ್ರೀಡಾಕೂಟಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು, ಬದಲಾದ ಪರಿಸ್ಥಿಯಿಂದಾಗಿ ಯುವಕರು ಕ್ರೀಡೆಗಳಿಗೆ ಹೆಚ್ಚು ಗಮನಹರಿಸುತ್ತಿಲ್ಲ. ಯುವಕರು ಹೆಚ್ಚಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯ ಸಮಾಜ ನಿರ್ಮಾಣದಲ್ಲಿ ತೊಗಡಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡರೆ ಗುರಿ ಸಾಧನೆಯೇನು ಕಷ್ಟವೆನಿಸುವುದಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, ‘ದೈಹಿಕ ಹಾಗೂ ಮಾನಸಿಕ ರೋಗಗಳನ್ನು ತಡೆಗಟ್ಟಲು ಕ್ರೀಡೆಗಳು ಸಹಕಾರಿ’. ‘ನಾವು ದೈಹಿಕವಾಗಿ ಆರೋಗ್ಯದಿಂದಿರಲು ಕ್ರೀಡೆ ಅತಿ ಮುಖ್ಯವಾಗಿದೆ. ಶಾಲಾ ಕಾಲೇಜುಗಳ ದಿನದಲ್ಲಿ ಓದುವ ಜತೆಗೆ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವುದು ಉತ್ತಮ’ ಎಂದರು.</p>.<p>ವಿವಿಧ ಜಿಲ್ಲೆಗಳಿಂದ ಒಟ್ಟು 40 ತಂಡಗಳು ಭಾಗವಹಿಸಿದದು, ಆ ಪೂಕಿ 16 ಬಾಲಕಿಯರ ಮತ್ತು 24 ಬಾಲಕರ ತಂಡಗಳು ಭಾಗವಹಿಸಿವೆ.ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>