‘ಶನಿವಾರ ಮಧ್ಯಾಹ್ನ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ನಂದಿಸುವಲ್ಲಿ ಪಿರಿಯಾಪಟ್ಟಣ, ಗೋಣಿಕೊಪ್ಪ ಮತ್ತು ಹುಣಸೂರು ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಶ್ರಮಿಸಿದರು. ಇದರಿಂದಾಗಿ ಮಧ್ಯಾಹ್ನ 3 ಗಂಟೆ ವೇಳೆಗೆ ನಿಯಂತ್ರಿಸಲು ಸಾಧ್ಯವಾಯಿತು’ ಎಂದು ಹುಲಿ ಯೋಜನೆ ನಿರ್ದೇಶಕ ಮಣಿಕಂಠನ್ ಹೇಳಿದರು.