ನವದೆಹಲಿ: ಫಿಟ್ನೆಸ್ ಕಾಯ್ದುಕೊಳ್ಳುವ ಸಲುವಾಗಿ ಭಾರತದ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಡದೇ ಇರಲು ನಿರ್ಧರಿಸಿದ್ದಾರೆ.
ಸಾತ್ವಿಕ್ ಭುಜದ ನೋವಿನಿಂದ ಬಳಲುತ್ತಿದ್ದಾರೆ.
ಹೀಗಾಗಿ ಮಲೇಷ್ಯಾ ಓಪನ್, ಇಂಡೊನೇಷ್ಯಾ ಓಪನ್ ಮತ್ತು ಆಲ್ ಇಂಗ್ಲೆಂಡ್ ಓಪನ್ ಟೂರ್ನಿಯಿಲ್ಲಿ ಆಡದೇ ಇರಲು ನಿರ್ಧರಿಸಿದ್ದರು. ಈ ಬಾರಿಯ ಮೊದಲ ಪಂದ್ಯವನ್ನು ಇಂಡಿಯನ್ ಓಪನ್ನಲ್ಲಿ ಆಡುವುದು ಅವರ ಉದ್ದೇಶವಾಗಿತ್ತು. ಆದರೆ ಈಗ ಅದೂ ಸಾಧ್ಯವಾಗುತ್ತಿಲ್ಲ. ಟೂರ್ನಿ ಮುಂದಿನ ಮಂಗಳವಾರ ಆರಂಭವಾಗಲಿದೆ.