<p><strong>ಬೆಂಗಳೂರು</strong>: ‘ಐದು ಆಟಗಳನ್ನು ಅಧಿಕೃತವಾಗಿ ಗ್ರಾಮೀಣ ಕ್ರೀಡೆಗಳೆಂದು ಗುರುತಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬಿಜೆಪಿ ಉತ್ತರ ಜಿಲ್ಲೆಯ ಕಿಸಾನ್ ಮೋರ್ಚಾದಿಂದ ಮಲ್ಲೇಶ್ವರದ ಚಂದ್ರಶೇಖರ್ ಆಜಾದ್ ಆಟ ಮೈದಾನದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ನಮೋ ಕಿಸಾನ್ ಕಪ್’ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕಬಡ್ಡಿ, ಕೊಕ್ಕೊ, ಕುಸ್ತಿ, ಕಂಬಳ ಹಾಗೂ ಎತ್ತಿನಗಾಡಿ ಓಟದ ಸ್ಪರ್ಧೆಗಳನ್ನು ಗ್ರಾಮೀಣ ಕ್ರೀಡೆಗಳ ಪಟ್ಟಿಗೆ ಸೇರಿಸಲಾಗಿದೆ. ಈ ಕ್ರೀಡೆಗಳಿಗೆ ಉತ್ತೇಜನ ನೀಡಲು ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿಯಿಂದ ಅನುದಾನ ಸಹ ನೀಡಲಾಗುವುದು’ ಎಂದರು.</p>.<p>‘ಕ್ರೀಡೆ ಮನಸ್ಸಿಗೆ ಸಂತೋಷ, ಉತ್ಸಾಹ ತುಂಬುತ್ತದೆ. ಶಿಸ್ತು, ಉತ್ತಮ ಆರೋಗ್ಯಕ್ಕೂ ಸಹಕಾರಿ’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಮೋದಿ ಅವರ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಸ್ಫೂರ್ತಿ ತುಂಬಲಿದೆ. ಮೋದಿ ಅವರು ಯುವಕರಿಗೆ ಸದಾ ಉತ್ಸಾಹ ತುಂಬುತ್ತಾರೆ’ ಎಂದರು.</p>.<p>ಇದಕ್ಕೂ ಮೊದಲು ಮುಖ್ಯಮಂತ್ರಿ ಕಬಡ್ಡಿ ಪಂದ್ಯಾವಳಿ ವೀಕ್ಷಿಸಿದರು.</p>.<p>ಪುರುಷರ ವಿಭಾಗದ ಮೊದಲ ಕಬಡ್ಡಿ ಪಂದ್ಯದಲ್ಲಿ ಬ್ಯಾಟರಾಯನಪುರ ವಿರುದ್ಧ ಮಲ್ಲೇಶ್ವರ ತಂಡವು ಗೆಲುವು ಸಾಧಿಸಿತು. ಮಹಿಳಾ ವಿಭಾಗದ ಕಬಡ್ಡಿಯಲ್ಲಿ ಕೆ.ಆರ್.ಪುರಂ ವಿರುದ್ಧ ಯಶವಂತಪುರ ತಂಡವು ಜಯಿಸಿತು.</p>.<p>ಸಂಸದ ಡಿ.ವಿ.ಸದಾನಂದಗೌಡ, ಸಚಿವರಾದ ಹಾಲಪ್ಪ ಆಚಾರ್ ಹಾಗೂ ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಐದು ಆಟಗಳನ್ನು ಅಧಿಕೃತವಾಗಿ ಗ್ರಾಮೀಣ ಕ್ರೀಡೆಗಳೆಂದು ಗುರುತಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬಿಜೆಪಿ ಉತ್ತರ ಜಿಲ್ಲೆಯ ಕಿಸಾನ್ ಮೋರ್ಚಾದಿಂದ ಮಲ್ಲೇಶ್ವರದ ಚಂದ್ರಶೇಖರ್ ಆಜಾದ್ ಆಟ ಮೈದಾನದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ನಮೋ ಕಿಸಾನ್ ಕಪ್’ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕಬಡ್ಡಿ, ಕೊಕ್ಕೊ, ಕುಸ್ತಿ, ಕಂಬಳ ಹಾಗೂ ಎತ್ತಿನಗಾಡಿ ಓಟದ ಸ್ಪರ್ಧೆಗಳನ್ನು ಗ್ರಾಮೀಣ ಕ್ರೀಡೆಗಳ ಪಟ್ಟಿಗೆ ಸೇರಿಸಲಾಗಿದೆ. ಈ ಕ್ರೀಡೆಗಳಿಗೆ ಉತ್ತೇಜನ ನೀಡಲು ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿಯಿಂದ ಅನುದಾನ ಸಹ ನೀಡಲಾಗುವುದು’ ಎಂದರು.</p>.<p>‘ಕ್ರೀಡೆ ಮನಸ್ಸಿಗೆ ಸಂತೋಷ, ಉತ್ಸಾಹ ತುಂಬುತ್ತದೆ. ಶಿಸ್ತು, ಉತ್ತಮ ಆರೋಗ್ಯಕ್ಕೂ ಸಹಕಾರಿ’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಮೋದಿ ಅವರ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಸ್ಫೂರ್ತಿ ತುಂಬಲಿದೆ. ಮೋದಿ ಅವರು ಯುವಕರಿಗೆ ಸದಾ ಉತ್ಸಾಹ ತುಂಬುತ್ತಾರೆ’ ಎಂದರು.</p>.<p>ಇದಕ್ಕೂ ಮೊದಲು ಮುಖ್ಯಮಂತ್ರಿ ಕಬಡ್ಡಿ ಪಂದ್ಯಾವಳಿ ವೀಕ್ಷಿಸಿದರು.</p>.<p>ಪುರುಷರ ವಿಭಾಗದ ಮೊದಲ ಕಬಡ್ಡಿ ಪಂದ್ಯದಲ್ಲಿ ಬ್ಯಾಟರಾಯನಪುರ ವಿರುದ್ಧ ಮಲ್ಲೇಶ್ವರ ತಂಡವು ಗೆಲುವು ಸಾಧಿಸಿತು. ಮಹಿಳಾ ವಿಭಾಗದ ಕಬಡ್ಡಿಯಲ್ಲಿ ಕೆ.ಆರ್.ಪುರಂ ವಿರುದ್ಧ ಯಶವಂತಪುರ ತಂಡವು ಜಯಿಸಿತು.</p>.<p>ಸಂಸದ ಡಿ.ವಿ.ಸದಾನಂದಗೌಡ, ಸಚಿವರಾದ ಹಾಲಪ್ಪ ಆಚಾರ್ ಹಾಗೂ ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>