ಜಿಲ್ಲಾ ಪಂಚಾಯ್ತಿ ಕಚೇರಿ, ಪೊಲೀಸ್ ಕೇಂದ್ರ ಕಚೇರಿ, ಹನುಮಾನ್ನಗರ ವೃತ್ತ, ಸರಸ್ವತಿನಗರದ ವಿವಿಧೆಡೆ ಮರಗಳು ಬಿದ್ದಿವೆ. ವಿದ್ಯುತ್ ಕಂಬಗಳು ಕೂಡ ಬಿದ್ದಿದ್ದರಿಂದ, ನಗರದ ಬಹುತೇಕ ಕಡೆಗಳಲ್ಲಿ ರಾತ್ರಿವರೆಗೂ ವಿದ್ಯುತ್ ಪೂರೈಕೆ ಇರಲಿಲ್ಲ. ಮರಗಳನ್ನು ತೆರವುಗೊಳಿಸುವುದು ಹಾಗೂ ವಿದ್ಯುತ್ ಮಾರ್ಗ ದುರಸ್ತಿಯಲ್ಲಿ ಕಾರ್ಮಿಕರು ತೊಡಗಿದ್ದರು.