<p><strong>ತಿರುವನಂತಪುರ</strong>: ಭಾರತ ಹಾಕಿ ತಂಡದ ಗೋಲ್ಕೀಪರ್ ಪಿ.ಆರ್.ಶ್ರೀಜೇಶ್ ಅವರಿಗೆ ಅಬುಧಾಬಿಯಲ್ಲಿ ನೆಲೆಸಿರುವ ಭಾರತದ ಉದ್ಯಮಿ ಡಾ.ಶಂಷೇರ್ ವಯಾಲಿಲ್ ಅವರು ₹1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ.</p>.<p>ಒಲಿಂಪಿಕ್ಸ್ ಹಾಕಿಯಲ್ಲಿ ಪುರುಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದು ಇತಿಹಾಸ ಬರೆದಿತ್ತು. ತಂಡದ ಕಂಚಿನ ಸಾಧನೆಯಲ್ಲಿ ಕೇರಳದ ಶ್ರೀಜೇಶ್ ಅವರ ಪಾತ್ರ ಮಹತ್ವದ್ದೆನಿಸಿತ್ತು. </p>.<p>‘ತಂಡವು ಕಂಚಿನ ಪದಕ ಜಯಿಸುವಲ್ಲಿ ಶ್ರೀಜೇಶ್, ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ಸಾಧನೆಯನ್ನು ಪರಿಗಣಿಸಿ ನಾವು ನಗದು ಬಹುಮಾನ ಘೋಷಿಸಿದ್ದೇವೆ’ ಎಂದು ವಿಪಿಎಸ್ ಹೆಲ್ತ್ಕೇರ್ನ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶಂಷೇರ್, ಸೋಮವಾರ ಟ್ವೀಟ್ ಮಾಡಿದ್ದಾರೆ.</p>.<p>ಜರ್ಮನಿ ಎದುರಿನ ‘ಪ್ಲೇ ಆಫ್’ ಹಣಾಹಣಿಯಲ್ಲಿ ಭಾರತ 5–4 ಗೋಲುಗಳಿಂದ ಮುನ್ನಡೆ ಗಳಿಸಿತ್ತು. ಅಂತಿಮ ಕ್ವಾರ್ಟರ್ನ ಆಟ ಮುಗಿಯಲು ಆರು ಸೆಕೆಂಡುಗಳು ಬಾಕಿ ಇದ್ದಾಗ ಜರ್ಮನಿಗೆ ಪೆನಾಲ್ಟಿ ಕಾರ್ನರ್ ಲಭಿಸಿತ್ತು. ಈ ಅವಕಾಶದಲ್ಲಿ ಶ್ರೀಜೇಶ್ ಎದುರಾಳಿಗಳ ಗೋಲುಗಳಿಕೆಯ ಪ್ರಯತ್ನವನ್ನು ವಿಫಲಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಭಾರತ ಹಾಕಿ ತಂಡದ ಗೋಲ್ಕೀಪರ್ ಪಿ.ಆರ್.ಶ್ರೀಜೇಶ್ ಅವರಿಗೆ ಅಬುಧಾಬಿಯಲ್ಲಿ ನೆಲೆಸಿರುವ ಭಾರತದ ಉದ್ಯಮಿ ಡಾ.ಶಂಷೇರ್ ವಯಾಲಿಲ್ ಅವರು ₹1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ.</p>.<p>ಒಲಿಂಪಿಕ್ಸ್ ಹಾಕಿಯಲ್ಲಿ ಪುರುಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದು ಇತಿಹಾಸ ಬರೆದಿತ್ತು. ತಂಡದ ಕಂಚಿನ ಸಾಧನೆಯಲ್ಲಿ ಕೇರಳದ ಶ್ರೀಜೇಶ್ ಅವರ ಪಾತ್ರ ಮಹತ್ವದ್ದೆನಿಸಿತ್ತು. </p>.<p>‘ತಂಡವು ಕಂಚಿನ ಪದಕ ಜಯಿಸುವಲ್ಲಿ ಶ್ರೀಜೇಶ್, ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ಸಾಧನೆಯನ್ನು ಪರಿಗಣಿಸಿ ನಾವು ನಗದು ಬಹುಮಾನ ಘೋಷಿಸಿದ್ದೇವೆ’ ಎಂದು ವಿಪಿಎಸ್ ಹೆಲ್ತ್ಕೇರ್ನ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶಂಷೇರ್, ಸೋಮವಾರ ಟ್ವೀಟ್ ಮಾಡಿದ್ದಾರೆ.</p>.<p>ಜರ್ಮನಿ ಎದುರಿನ ‘ಪ್ಲೇ ಆಫ್’ ಹಣಾಹಣಿಯಲ್ಲಿ ಭಾರತ 5–4 ಗೋಲುಗಳಿಂದ ಮುನ್ನಡೆ ಗಳಿಸಿತ್ತು. ಅಂತಿಮ ಕ್ವಾರ್ಟರ್ನ ಆಟ ಮುಗಿಯಲು ಆರು ಸೆಕೆಂಡುಗಳು ಬಾಕಿ ಇದ್ದಾಗ ಜರ್ಮನಿಗೆ ಪೆನಾಲ್ಟಿ ಕಾರ್ನರ್ ಲಭಿಸಿತ್ತು. ಈ ಅವಕಾಶದಲ್ಲಿ ಶ್ರೀಜೇಶ್ ಎದುರಾಳಿಗಳ ಗೋಲುಗಳಿಕೆಯ ಪ್ರಯತ್ನವನ್ನು ವಿಫಲಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>