ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಜನಾರ್ದನ್,‘ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಹಾಗೂ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪಂದ್ಯಾವಳಿಗಳನ್ನು ಏರ್ಪಡಿಸಿದ್ದೇವೆ. ಸಂಯೋಜಿತ ಕಾಲೇಜುಗಳು ಹಾಗೂ ಗ್ರಾಮೀಣ ಭಾಗದ ಕಾಲೇಜುಗಳ ವಿದ್ಯಾರ್ಥಿಗಳ ಸಮಾಗಮಕ್ಕೆ ಈ ಪಂದ್ಯಾವಳಿ ಸಾಕ್ಷಿಯಾಗಲಿದೆ’ ಎಂದು ತಿಳಿಸಿದರು.