ಶನಿವಾರ ರಾತ್ರಿ ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಇನ್ನಂಜೆಯ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ದೇವು ಅಂಚನ್ ಕೂಡ ಭಾಗವಹಿಸಿದ್ದರು. ವಾಲಿಬಾಲ್ ಪಂದ್ಯಾಟ ಮುಗಿಸಿ ಅಂಗಳದ ಬದಿಯಲ್ಲಿ ವಿಶ್ರಾಂತಿ ಪಡೆಯುವಾಗ ಹೃದಯಾಘಾತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಿ ಮೃತಪಟ್ಟಿದ್ದಾರೆ.