ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿನ್ನಾಪುರ ಕ್ರಾಸ್ ಬಳಿ ₹3.5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಸ್ ತಂಗುದಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಶಿರಲೆ ಜಲಪಾತಕ್ಕೆ ಹೋಗುವ ₹ 1.5 ಕೋಟಿ ವೆಚ್ಚದ, ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಿದರು. ₹ 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಣಜೋಗ ಕಾಂಕ್ರಿಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗಂಗಾ ಗೌಡ, ಸದಸ್ಯ ನಾಗರಾಜ ನಾಯ್ಕ, ಹಿರಿಯರಾದ ಪ್ರೇಮಾನಂದ ನಾಯ್ಕ, ಮಹಾಬಲೇಶ್ವರ ಭಟ್ಟ ಸುಣಜೋಗ, ಶಿವರಾಮ ಭಟ್ಟ, ನಾರಾಯಣ ಭಟ್ಟ, ಕೃಷ್ಣಾನಂದ ನಾಯ್ಕ ಉಪಸ್ಥಿತರಿದ್ದರು.