<p><strong>ಬೆಂಗಳೂರು</strong>: ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ ಕೋವಿಡ್–19 ಸೋಂಕಿನಿಂದ ಬಳಲುತ್ತಿದ್ದ ಭಾರತ ಹಾಕಿ ತಂಡದ ಆರು ಆಟಗಾರರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿರುವ ಆಸ್ಪತ್ರೆಯಿಂದ ಸೋಮವಾರ ಸಂಜೆಅವರು ಬಿಡುಗಡೆಯಾಗುವರು ಎಂದು ಮೂಲಗಳು ತಿಳಿಸಿವೆ.</p>.<p>ಮನ್ಪ್ರೀತ್, ಡಿಫೆಂಡರ್ ಸುರೇಂದರ್ ಕುಮಾರ್, ಜಸ್ಕರನ್ ಸಿಂಗ್, ವರುಣ್ ಕುಮಾರ್, ಗೋಲ್ಕೀಪರ್ ಕೃಷ್ಣಬಹಾದ್ದೂರ್ ಪಾಠಕ್ ಹಾಗೂ ಮನ್ದೀಪ್ ಸಿಂಗ್ ಅವರು ಸದ್ಯ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಗಾಗಿದ್ದು, ವರದಿ ನೆಗೆಟಿವ್ ಬಂದಿದ್ದು, ಆರೋಗ್ಯವಾಗಿದ್ದಾರೆ.</p>.<p>ಆಗಸ್ಟ್ 10–12ರಂದು ನಡೆಸಿದ ಪರೀಕ್ಷೆಯಲ್ಲಿ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು.</p>.<p>ಮನ್ದೀಪ್ ಅವರ ರಕ್ತದಲ್ಲಿ ಆಕ್ಸಿಜನ್ ಪ್ರಮಾಣ ಕುಸಿದಿತ್ತು. ಹೀಗಾಗಿಅವರನ್ನು ಭಾರತ ಕ್ರೀಡಾ ಪ್ರಾಧಿಕಾರದ (ಸಾಯ್) ಅಧಿಕಾರಿಗಳು ಬೆಂಗಳೂರಿನ ಎಸ್ಎಸ್ ಸ್ಪರ್ಶ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಮನ್ಪ್ರೀತ್ ಹಾಗೂ ಇತರ ನಾಲ್ವರು ಆಟಗಾರರನ್ನೂ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಭಾರತ ಪುರುಷ ಹಾಗೂ ಮಹಿಳಾ ಹಾಕಿ ತಂಡಗಳ ತರಬೇತಿ ಶಿಬಿರಗಳು ಬುಧವಾರದಿಂದ ಆರಂಭವಾಗಲಿವೆ.</p>.<p>ಸೋಂಕಿನಿಂದ ಗುಣಮುಖರಾದ ಆರು ಆಟಗಾರರು ಇನ್ನಷ್ಟು ದಿನ ತಂಡದಿಂದ ಪ್ರತ್ಯೇಕವಾಗಿ ಇರಬೇಕಾಗಿದೆ.</p>.<p>ಸದ್ಯ 33 ಪುರುಷ ಹಾಗೂ 24 ಮಹಿಳಾ ಆಟಗಾರರು ಶಿಬಿರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಲ್ಲಿದ್ದಾರೆ.ಈ ಅಲ್ಪ ಅವಧಿಯ ಶಿಬಿರವುಸೆಪ್ಟೆಂಬರ್ 30ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.</p>.<p>‘ಸರ್ಕಾರದ ಕೋವಿಡ್ ಪ್ರಸರಣ ತಡೆ ಮಾರ್ಗಸೂಚಿಗಳ ಅನ್ವಯ, ಸೋಂಕಿನಿಂದ ಗುಣಮುಖರಾದ ಆಟಗಾರರು ಸಾಯ್ ಆವರಣದೊಳಗೇ ಒಂದು ವಾರ ಅಥವಾ 10 ದಿನಗಳ ಕಾಲ ಪ್ರತ್ಯೇಕವಾಸದಲ್ಲಿ ಇರಬೇಕಾಗುತ್ತದೆ‘ ಎಂದು ಮೂಲಗಳು ತಿಳಿಸಿವೆ.</p>.<p>ಎಲ್ಲ ಆಟಗಾರ್ತಿಯರ ಕೋವಿಡ್ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ ಕೋವಿಡ್–19 ಸೋಂಕಿನಿಂದ ಬಳಲುತ್ತಿದ್ದ ಭಾರತ ಹಾಕಿ ತಂಡದ ಆರು ಆಟಗಾರರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿರುವ ಆಸ್ಪತ್ರೆಯಿಂದ ಸೋಮವಾರ ಸಂಜೆಅವರು ಬಿಡುಗಡೆಯಾಗುವರು ಎಂದು ಮೂಲಗಳು ತಿಳಿಸಿವೆ.</p>.<p>ಮನ್ಪ್ರೀತ್, ಡಿಫೆಂಡರ್ ಸುರೇಂದರ್ ಕುಮಾರ್, ಜಸ್ಕರನ್ ಸಿಂಗ್, ವರುಣ್ ಕುಮಾರ್, ಗೋಲ್ಕೀಪರ್ ಕೃಷ್ಣಬಹಾದ್ದೂರ್ ಪಾಠಕ್ ಹಾಗೂ ಮನ್ದೀಪ್ ಸಿಂಗ್ ಅವರು ಸದ್ಯ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಗಾಗಿದ್ದು, ವರದಿ ನೆಗೆಟಿವ್ ಬಂದಿದ್ದು, ಆರೋಗ್ಯವಾಗಿದ್ದಾರೆ.</p>.<p>ಆಗಸ್ಟ್ 10–12ರಂದು ನಡೆಸಿದ ಪರೀಕ್ಷೆಯಲ್ಲಿ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು.</p>.<p>ಮನ್ದೀಪ್ ಅವರ ರಕ್ತದಲ್ಲಿ ಆಕ್ಸಿಜನ್ ಪ್ರಮಾಣ ಕುಸಿದಿತ್ತು. ಹೀಗಾಗಿಅವರನ್ನು ಭಾರತ ಕ್ರೀಡಾ ಪ್ರಾಧಿಕಾರದ (ಸಾಯ್) ಅಧಿಕಾರಿಗಳು ಬೆಂಗಳೂರಿನ ಎಸ್ಎಸ್ ಸ್ಪರ್ಶ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಮನ್ಪ್ರೀತ್ ಹಾಗೂ ಇತರ ನಾಲ್ವರು ಆಟಗಾರರನ್ನೂ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಭಾರತ ಪುರುಷ ಹಾಗೂ ಮಹಿಳಾ ಹಾಕಿ ತಂಡಗಳ ತರಬೇತಿ ಶಿಬಿರಗಳು ಬುಧವಾರದಿಂದ ಆರಂಭವಾಗಲಿವೆ.</p>.<p>ಸೋಂಕಿನಿಂದ ಗುಣಮುಖರಾದ ಆರು ಆಟಗಾರರು ಇನ್ನಷ್ಟು ದಿನ ತಂಡದಿಂದ ಪ್ರತ್ಯೇಕವಾಗಿ ಇರಬೇಕಾಗಿದೆ.</p>.<p>ಸದ್ಯ 33 ಪುರುಷ ಹಾಗೂ 24 ಮಹಿಳಾ ಆಟಗಾರರು ಶಿಬಿರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಲ್ಲಿದ್ದಾರೆ.ಈ ಅಲ್ಪ ಅವಧಿಯ ಶಿಬಿರವುಸೆಪ್ಟೆಂಬರ್ 30ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.</p>.<p>‘ಸರ್ಕಾರದ ಕೋವಿಡ್ ಪ್ರಸರಣ ತಡೆ ಮಾರ್ಗಸೂಚಿಗಳ ಅನ್ವಯ, ಸೋಂಕಿನಿಂದ ಗುಣಮುಖರಾದ ಆಟಗಾರರು ಸಾಯ್ ಆವರಣದೊಳಗೇ ಒಂದು ವಾರ ಅಥವಾ 10 ದಿನಗಳ ಕಾಲ ಪ್ರತ್ಯೇಕವಾಸದಲ್ಲಿ ಇರಬೇಕಾಗುತ್ತದೆ‘ ಎಂದು ಮೂಲಗಳು ತಿಳಿಸಿವೆ.</p>.<p>ಎಲ್ಲ ಆಟಗಾರ್ತಿಯರ ಕೋವಿಡ್ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>