ಮನದೀಪ್ ಸಿಂಗ್, ಸಿಮ್ರನ್ಜೀತ್ ಸಿಂಗ್ ಮತ್ತು ವರುಣ್ ಕುಮಾರ್ ಹಿಂದಿನ ಪಂದ್ಯಗಳಲ್ಲಿ ಗೋಲು ದಾಖಲಿಸಿದ್ದರು. ಉತ್ತಮ ಲಯದಲ್ಲಿರುವ ಇವರು ಮಲೇಷ್ಯಾ ಎದುರೂ ಮೋಡಿ ಮಾಡಲು ಉತ್ಸುಕರಾಗಿದ್ದಾರೆ. ನಾಯಕ ಮನದೀಪ್, ಅನುಭವಿ ಗೋಲ್ಕೀಪರ್ ಪಿ.ಆರ್.ಶ್ರೀಜೇಶ್, ಡಿಫೆಂಡರ್ ಸುರೇಂದರ್ ಕುಮಾರ್ ಹಾಗೂ ಮಿಡ್ಫೀಲ್ಡರ್ ವಿವೇಕ್ ಸಾಗರ್ ಪ್ರಸಾದ್ ಅವರ ಮೇಲೂ ಹೆಚ್ಚಿನ ಜವಾಬ್ದಾರಿ ಇದೆ.