<p><strong>ನವದೆಹಲಿ:</strong> 2021ರ ಆರಂಭದಲ್ಲಿ ಕೆಲವು ಟೂರ್ನಿಗಳನ್ನು ಆಯೋಜಿಸುವ ವಿಶ್ವಾಸವಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಈ ವರ್ಷದ ಮಾರ್ಚ್ನಿಂದ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ರಾಷ್ಟ್ರೀಯ ಶಿಬಿರಗಳೂ ನಡೆದಿರಲಿಲ್ಲ.</p>.<p>ಕಳೆದ ಕೆಲವು ತಿಂಗಳಿನಿಂದ ಅಥ್ಲೀಟುಗಳು ಕ್ರಮೇಣ ತರಬೇತಿ ಆರಂಭಿಸಿದ್ದಾರೆ.</p>.<p>’ಅಕ್ಟೋಬರ್ನಲ್ಲಿ ಕ್ರೀಡಾಚಟುವಟಿಕೆಗಳನ್ನು ಆರಂಭಿಸುವ ಯೋಚನೆ ಇತ್ತು. ಆದರೆ ಕೊರೊನಾ ಸೋಂಕು ಪ್ರಕರಣಗಳು ಏರುಗತಿಯಲ್ಲೇ ಸಾಗಿದ್ದರಿಂದ ಸಾಧ್ಯವಾಗಿಲ್ಲ‘ ಎಂದು ಶನಿವಾರ ನಡೆದ ಸ್ಪೋರ್ಟ್ಸ್ ಡಾಟ್ ಕಾಮ್ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಜಿಜು ಹೇಳಿದರು.</p>.<p>‘ಕೊರೊನಾಗೆ ಲಸಿಕೆ ಕಂಡುಹಿಡಿಯುವ ವಿಷಯದಲ್ಲಿ ಕೆಲವು ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿವೆ. ಮುಂದಿನ ವರ್ಷದ ಆರಂಭದಲ್ಲಿ ಟೂರ್ನಿಗಳನ್ನು ಆರಂಭಿಸಬಹುದು‘ ಎಂದು ರಿಜಿಜು ನುಡಿದರು.</p>.<p>ಭಾರತದಲ್ಲಿ ಇದುವರೆಗೆ 64 ಲಕ್ಷಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಒಂದು ಲಕ್ಷಕ್ಕಿಂತ ಅಧಿಕ ಜನರ ಸಾವು ಸಂಭವಿಸಿದೆ.</p>.<p>ಕೆಲವು ಹಾಕಿ ಆಟಗಾರರು ಸೇರಿದಂತೆ ಹಲವು ಅಥ್ಲೀಟುಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು.</p>.<p>‘ಈಗಾಗಲೇ ತರಬೇತಿ ಪಡೆಯುತ್ತಿರುವ ಅಥ್ಲೀಟುಗಳ ಪ್ರಗತಿ ಪರಿಶೀಲಿಸಲಾಗುತ್ತಿದೆ. ಜೂನಿಯರ್ ಅಥ್ಲೀಟುಗಳ ಅಭ್ಯಾಸಕ್ಕೆ ಶೀಘ್ರ ಅವಕಾಶ ಕಲ್ಪಿಸಲಾಗುವುದು‘ ಎಂದು ರಿಜಿಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2021ರ ಆರಂಭದಲ್ಲಿ ಕೆಲವು ಟೂರ್ನಿಗಳನ್ನು ಆಯೋಜಿಸುವ ವಿಶ್ವಾಸವಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಈ ವರ್ಷದ ಮಾರ್ಚ್ನಿಂದ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ರಾಷ್ಟ್ರೀಯ ಶಿಬಿರಗಳೂ ನಡೆದಿರಲಿಲ್ಲ.</p>.<p>ಕಳೆದ ಕೆಲವು ತಿಂಗಳಿನಿಂದ ಅಥ್ಲೀಟುಗಳು ಕ್ರಮೇಣ ತರಬೇತಿ ಆರಂಭಿಸಿದ್ದಾರೆ.</p>.<p>’ಅಕ್ಟೋಬರ್ನಲ್ಲಿ ಕ್ರೀಡಾಚಟುವಟಿಕೆಗಳನ್ನು ಆರಂಭಿಸುವ ಯೋಚನೆ ಇತ್ತು. ಆದರೆ ಕೊರೊನಾ ಸೋಂಕು ಪ್ರಕರಣಗಳು ಏರುಗತಿಯಲ್ಲೇ ಸಾಗಿದ್ದರಿಂದ ಸಾಧ್ಯವಾಗಿಲ್ಲ‘ ಎಂದು ಶನಿವಾರ ನಡೆದ ಸ್ಪೋರ್ಟ್ಸ್ ಡಾಟ್ ಕಾಮ್ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಜಿಜು ಹೇಳಿದರು.</p>.<p>‘ಕೊರೊನಾಗೆ ಲಸಿಕೆ ಕಂಡುಹಿಡಿಯುವ ವಿಷಯದಲ್ಲಿ ಕೆಲವು ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿವೆ. ಮುಂದಿನ ವರ್ಷದ ಆರಂಭದಲ್ಲಿ ಟೂರ್ನಿಗಳನ್ನು ಆರಂಭಿಸಬಹುದು‘ ಎಂದು ರಿಜಿಜು ನುಡಿದರು.</p>.<p>ಭಾರತದಲ್ಲಿ ಇದುವರೆಗೆ 64 ಲಕ್ಷಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಒಂದು ಲಕ್ಷಕ್ಕಿಂತ ಅಧಿಕ ಜನರ ಸಾವು ಸಂಭವಿಸಿದೆ.</p>.<p>ಕೆಲವು ಹಾಕಿ ಆಟಗಾರರು ಸೇರಿದಂತೆ ಹಲವು ಅಥ್ಲೀಟುಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು.</p>.<p>‘ಈಗಾಗಲೇ ತರಬೇತಿ ಪಡೆಯುತ್ತಿರುವ ಅಥ್ಲೀಟುಗಳ ಪ್ರಗತಿ ಪರಿಶೀಲಿಸಲಾಗುತ್ತಿದೆ. ಜೂನಿಯರ್ ಅಥ್ಲೀಟುಗಳ ಅಭ್ಯಾಸಕ್ಕೆ ಶೀಘ್ರ ಅವಕಾಶ ಕಲ್ಪಿಸಲಾಗುವುದು‘ ಎಂದು ರಿಜಿಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>