ಪ್ರಕರಣದ ವಿವರ: ಮಂಜುನಾಥ್ ತೀವ್ರ ತಲೆನೋವಿನಿಂದ ಬಳಲುತ್ತಿದ್ದರು. 2017ರ ಫೆ. 2ರಂದು ಆರೋಗ್ಯ ತಪಾಸಣೆ ನಡೆಸಿದ್ದ ವೈದೇಹಿ ಆಸ್ಪತ್ರೆಯ ವೈದ್ಯರು, ‘ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದೆ. ಕೂಡಲೇ ಶಸ್ತ್ರಚಿಕಿತ್ಸೆ ಮಾಡಬೇಕು. ಇಲ್ಲದಿದ್ದರೆ, ಪ್ರಾಣಕ್ಕೆ ಅಪಾಯವಿದೆ’ ಎಂದಿದ್ದರು. ಶಸ್ತ್ರಚಿಕಿತ್ಸೆ ಸಮಯದಲ್ಲಿ ವೈದ್ಯರು, ಮಗನ ತಲೆಯ ಸ್ವಲ್ಪ ಭಾಗದ ಚಿಪ್ಪು ಹೊರಗೆ ತೆಗೆದಿದ್ದರು ಎಂದು ರುಕ್ಮಿಣಿಯಮ್ಮ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದರು.