ಏಷ್ಯನ್ ಕ್ರೀಡಾಕೂಟದಲ್ಲಿ ನಿರೀಕ್ಷಿತ ಸಾಮರ್ಥ್ಯ ತೋರಲಾಗದೆ ಟೀಕೆಗೆ ಒಳಗಾಗಿರುವ ಭಾರತ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದು ಗೌರವ ಉಳಿಸಿಕೊಳ್ಳುವ ಬಯಕೆಯಲ್ಲಿದೆ. ವಿಶ್ವಕಪ್ಗೂ ಮುನ್ನ ಇದು ಕೊನೆಯ ಪ್ರಮುಖ ಟೂರ್ನಿಯಾಗಿದೆ. ವಿಶ್ವಕಪ್ನಲ್ಲಿ ನಿರಾಳವಾಗಿ ಕಣಕ್ಕೆ ಇಳಿಯಬೇಕಾದರೆ ಇಲ್ಲಿ ಪ್ರಶಸ್ತಿ ಗೆಲ್ಲಬೇಕಾದ ಅಗತ್ಯವೂ ತಂಡಕ್ಕಿದೆ. ಹೀಗಾಗಿ ಸೆಮಿಫೈನಲ್ ಪಂದ್ಯ ಮಹತ್ವ ಪಡೆದುಕೊಂಡಿದೆ.