ಬ್ಯಾಡ್ಮಿಂಟನ್ ಪಟುಗಳಾದ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್, ಆರ್ಚರ್ಗಳಾದ ದೀಪಿಕಾ ಕುಮಾರಿ, ಅತನು ದಾಸ್, ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್ ಮತ್ತು ಜಿಮ್ನಾಸ್ಟ್ ಪ್ರಣತಿ ನಾಯಕ್ ತಾಲೀಮು ನಡೆಸಿದರು. ಶನಿವಾರ ರಾತ್ರಿ ನವದೆಹಲಿಯಿಂದ ಹೊರಟ ಭಾರತದ ಮೊದಲ ತಂಡ ಭಾನುವಾರ ಕೋವಿಡ್ ನಿಯಮಾವಳಿಗಳ ಪ್ರಕಾರ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಕ್ರೀಡಾ ಗ್ರಾಮ ಪ್ರವೇಶಿಸಿದ್ದರು.