ಇದಕ್ಕಾಗಿ ಅವರು ಆಡಳಿತ ಯಂತ್ರವನ್ನು ಬಳಸಿಕೊಂಡಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯ ಏಜೆಂಟ್ ಜಿಲ್ಲಾ ಚುನಾವಣಾಧಿಕಾರಿಗೆ ಲಿಖಿತ ದೂರು ನೀಡಿದ್ದಾರೆ. ಅದರ ಒಂದು ಪ್ರತಿಯನ್ನು ಲಗತ್ತಿಸಿದ್ದು, ತಕ್ಷಣವೇ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಮುಖ್ಯ ಚುನಾವಣಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.