ಮಂಗಳೂರು ವಿಶ್ವವಿದ್ಯಾಲಯ ಹಾಗೂ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ ಮಾತನಾಡಿ ‘ಉದ್ಘಾಟನೆಗೂ ಮುನ್ನ ಮೆರವಣಿಗೆ ನಡೆಯಲಿದ್ದು, ಕಲೆ, ಸಂಸ್ಕೃತಿ ಬಿಂಬಿಸುವ 79 ತಂಡಗಳು ಪಾಲ್ಗೊಳ್ಳಲಿವೆ. ಪಿ.ಟಿ.ಉಷಾ ಅವರನ್ನು ಗೌರವಿಸಲಾಗುವುದು’ ಎಂದರು.