ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಅಂತರರಾಷ್ಟ್ರೀಯ ಸೈಕ್ಲಿಸ್ಟ್ ಚಂದ್ರು ಕುರಣಿ ನಿಧನ

Last Updated 24 ಏಪ್ರಿಲ್ 2021, 6:22 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕುಂಬಾರಹಳ್ಳ ಗ್ರಾಮದ ನಿವಾಸಿ ಮಾಜಿ ಅಂತರರಾಷ್ಟ್ರೀಯ ಸೈಕ್ಲಿಸ್ಟ್ ಚಂದ್ರು ಮಲ್ಲಪ್ಪ ಕುರಣಿ ಶುಕ್ರವಾರ ತಡರಾತ್ರಿ ನಿಧನರಾದರು.

ಅವರ ಅಂತ್ಯ ಸಂಸ್ಕಾರ ಶನಿವಾರ ಕುಂಬಾರಹಳ್ಳ ಗ್ರಾಮದ ತೋಟದ ಮನೆಯಲ್ಲಿ ಜರುಗುವುದು.

ಈ ಹಿಂದೆ ಅಂತರರಾಷ್ಟ್ರೀಯ ಮಟ್ಟದ ಹಲವು ಸೈಕ್ಲಿಂಗ್ ಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿರುವ ಚಂದ್ರು, ಸೈಕ್ಲಿಂಗ್ ತರಬೇತುದಾರರಾಗಿ, ಸಂಘಟಕರಾಗಿ ಹೆಸರು ಮಾಡಿದ್ದರು.

ಚಂದ್ರು ಅವರ ಕೈಯಲ್ಲಿ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ನೂರಾರು ಮಂದಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸೈಕ್ಲಿಸ್ಟಗಳು ರೂಪುಗೊಂಡಿದ್ದು, ಪೊಲೀಸ್ ಹಾಗೂ ರೈಲ್ವೆ ಇಲಾಖೆಗಳಲ್ಲಿ ಉದ್ಯೋಗ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT