‘ಕೊರೊನಾದಿಂದ ಇಡೀ ದೇಶವೇ ತಲ್ಲಣಿಸಿದೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರಕ್ಕೆ ನೆರವಿನ ಹಸ್ತ ಚಾಚುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಕಾರ್ಯಕ್ಕೆ ಕೈಜೋಡಿಸಿದ ರಾಷ್ಟ್ರೀಯ ಕ್ರೀಡಾ ಫೆಡರೇಷನ್ಗಳು (ಎನ್ಎಸ್ಎಫ್), ಐಒಎ ಮಾನ್ಯತೆ ಹೊಂದಿರುವ ರಾಜ್ಯ ಸಂಸ್ಥೆಗಳು ಹಾಗೂ ಇತರೆ ಫೆಡರೇಷನ್ಗಳಿಗೆ ನಾವು ಆಭಾರಿಯಾಗಿದ್ದೇವೆ’ ಎಂದು ಐಒಎ ಮಹಾ ಕಾರ್ಯದರ್ಶಿ ರಾಜೀವ್ ಮೆಹ್ತಾ, ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.