<p><strong>ತಿಕೋಟಾ: </strong>ಯಾವುದೇ ವಿಶೇಷ ತರಬೇತಿಯನ್ನು ಪಡೆಯದೆಯೇ, ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನದಲ್ಲಿ ಜಾವಲಿನ್ ಎಸೆತದಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ವಿದ್ಯಾರ್ಥಿಯೊಬ್ಬ ಅಪ್ರತಿಮ ಸಾಧನೆ ಮಾಡಿದ್ದಾನೆ.</p>.<p>ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಿದ್ದಪ್ಪ ಅಟಪಳಕರ ಈ ಸಾಧನೆ ಮಾಡಿದವ. ಚಿಕ್ಕಂದಿನಿಂದಲೂ ಆಟದಲ್ಲಿ ಆಸಕ್ತಿ ಹೊಂದಿದ್ದ ಈತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದ ಎಲ್ಲ ಆಟಗಳಲ್ಲಿ ಭಾಗವಹಿಸುತ್ತಿದ್ದ.</p>.<p>2010-11ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಪ್ರೌಢಶಾಲಾ ವಿಭಾಗದ ಜಾವಲಿನ್ ಎಸೆತದಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ, ಜಿಲ್ಲಾ ಮಟ್ಟದಲ್ಲಿ ಪ್ರಥಮ, 2011-12ರಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ನಂತರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ.</p>.<p>2012-13ರಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಉತ್ತರ ಪ್ರದೇಶದ ಇಟಾವಾಹದಲ್ಲಿ ನಡೆದ 58 ನ್ಯಾಷನಲ್ ಸ್ಕೂಲ್ ಗೇಮ್ಸ್ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕೀರ್ತಿ ಈತನದ್ದು.</p>.<p>ಇಷ್ಟೆ ಅಲ್ಲದೇ, 2011ರಲ್ಲಿ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನಶಿಪ್ನ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ವಿಜಯಪುರದ ನೆಹರೂ ಯುವ ಕೇಂದ್ರ ನಡೆಸಿದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಗಳಿಸಿದ್ದಾನೆ.</p>.<p>2014-15ರಲ್ಲಿ ಬೆಳಗಾವಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾನೆ.</p>.<p>ಜಾವಲಿನ್ ಎಸೆತ ಅಷ್ಟೆ ಅಲ್ಲದೇ 2010-11 ರಲ್ಲಿ ತಾಲ್ಲೂಕು ಮಟ್ಟದ ಟ್ರಿಪಲ್ ಜಂಪ್ನಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.</p>.<p>ಸಿದ್ದಪ್ಪ 4ನೇ ತರಗತಿಯಲ್ಲಿ ಇದ್ದಾಗ ತಂದೆಯನ್ನು ಕಳೆದುಕೊಂಡ. ತಾಯಿಯ ಆಶ್ರಯದಲ್ಲಿ ಬೆಳೆದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕಳ್ಳಕವಟಗಿಯಲ್ಲಿ ಪೂರೈಸಿದ. ವಿಜಯಪುರದ ವಿ.ಬಿ.ದರಬಾರ ಕಾಲೇಜಿನಲ್ಲಿ ಪಿಯು ಓದಿ, ಇದೀಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.</p>.<p>‘2016ರಲ್ಲಿ ಕ್ರೀಡಾ ಅಭ್ಯಾಸ ಮಾಡುತ್ತಿದ್ದಾಗ ಕೈಮೂಳೆ ಮುರಿಯಿತು. ಇದು ಒಂದೆಡೆಯಾದರೆ, ಇನ್ನೊಂದೆಡೆ ಆರ್ಥಿಕ ತೊಂದರೆ ಎದುರಾಯಿತು. ಹೀಗಾಗಿ ಯಾವ ಸ್ಪರ್ಧೆಗಳಲ್ಲೂ ಪಾಲ್ಗೊಳ್ಳಲಿಲ್ಲ. ಮುಂಬರುವ ದಿನಗಳಲ್ಲಿ ಮತ್ತೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ಸಿದ್ದಪ್ಪ ಹೇಳಿದರು.</p>.<p>‘ಯಾವುದೇ ವಿಶೇಷ ತರಬೇತಿ ಪಡೆಯದೇ ತನ್ನ ಸ್ವ ಸಾಮರ್ಥದ ಮೂಲಕ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಇದು ಹೆಮ್ಮೆಯ ಸಂಗತಿ’ ಎಂದು ತಿಕೋಟಾ ತಾಲ್ಲೂಕು ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಾರುತಿ ಜಾಧವ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಕೋಟಾ: </strong>ಯಾವುದೇ ವಿಶೇಷ ತರಬೇತಿಯನ್ನು ಪಡೆಯದೆಯೇ, ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನದಲ್ಲಿ ಜಾವಲಿನ್ ಎಸೆತದಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ವಿದ್ಯಾರ್ಥಿಯೊಬ್ಬ ಅಪ್ರತಿಮ ಸಾಧನೆ ಮಾಡಿದ್ದಾನೆ.</p>.<p>ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಿದ್ದಪ್ಪ ಅಟಪಳಕರ ಈ ಸಾಧನೆ ಮಾಡಿದವ. ಚಿಕ್ಕಂದಿನಿಂದಲೂ ಆಟದಲ್ಲಿ ಆಸಕ್ತಿ ಹೊಂದಿದ್ದ ಈತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದ ಎಲ್ಲ ಆಟಗಳಲ್ಲಿ ಭಾಗವಹಿಸುತ್ತಿದ್ದ.</p>.<p>2010-11ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಪ್ರೌಢಶಾಲಾ ವಿಭಾಗದ ಜಾವಲಿನ್ ಎಸೆತದಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ, ಜಿಲ್ಲಾ ಮಟ್ಟದಲ್ಲಿ ಪ್ರಥಮ, 2011-12ರಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ನಂತರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ.</p>.<p>2012-13ರಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಉತ್ತರ ಪ್ರದೇಶದ ಇಟಾವಾಹದಲ್ಲಿ ನಡೆದ 58 ನ್ಯಾಷನಲ್ ಸ್ಕೂಲ್ ಗೇಮ್ಸ್ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕೀರ್ತಿ ಈತನದ್ದು.</p>.<p>ಇಷ್ಟೆ ಅಲ್ಲದೇ, 2011ರಲ್ಲಿ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನಶಿಪ್ನ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ವಿಜಯಪುರದ ನೆಹರೂ ಯುವ ಕೇಂದ್ರ ನಡೆಸಿದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಗಳಿಸಿದ್ದಾನೆ.</p>.<p>2014-15ರಲ್ಲಿ ಬೆಳಗಾವಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾನೆ.</p>.<p>ಜಾವಲಿನ್ ಎಸೆತ ಅಷ್ಟೆ ಅಲ್ಲದೇ 2010-11 ರಲ್ಲಿ ತಾಲ್ಲೂಕು ಮಟ್ಟದ ಟ್ರಿಪಲ್ ಜಂಪ್ನಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.</p>.<p>ಸಿದ್ದಪ್ಪ 4ನೇ ತರಗತಿಯಲ್ಲಿ ಇದ್ದಾಗ ತಂದೆಯನ್ನು ಕಳೆದುಕೊಂಡ. ತಾಯಿಯ ಆಶ್ರಯದಲ್ಲಿ ಬೆಳೆದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕಳ್ಳಕವಟಗಿಯಲ್ಲಿ ಪೂರೈಸಿದ. ವಿಜಯಪುರದ ವಿ.ಬಿ.ದರಬಾರ ಕಾಲೇಜಿನಲ್ಲಿ ಪಿಯು ಓದಿ, ಇದೀಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.</p>.<p>‘2016ರಲ್ಲಿ ಕ್ರೀಡಾ ಅಭ್ಯಾಸ ಮಾಡುತ್ತಿದ್ದಾಗ ಕೈಮೂಳೆ ಮುರಿಯಿತು. ಇದು ಒಂದೆಡೆಯಾದರೆ, ಇನ್ನೊಂದೆಡೆ ಆರ್ಥಿಕ ತೊಂದರೆ ಎದುರಾಯಿತು. ಹೀಗಾಗಿ ಯಾವ ಸ್ಪರ್ಧೆಗಳಲ್ಲೂ ಪಾಲ್ಗೊಳ್ಳಲಿಲ್ಲ. ಮುಂಬರುವ ದಿನಗಳಲ್ಲಿ ಮತ್ತೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ಸಿದ್ದಪ್ಪ ಹೇಳಿದರು.</p>.<p>‘ಯಾವುದೇ ವಿಶೇಷ ತರಬೇತಿ ಪಡೆಯದೇ ತನ್ನ ಸ್ವ ಸಾಮರ್ಥದ ಮೂಲಕ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಇದು ಹೆಮ್ಮೆಯ ಸಂಗತಿ’ ಎಂದು ತಿಕೋಟಾ ತಾಲ್ಲೂಕು ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಾರುತಿ ಜಾಧವ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>