ಶಾಲೆ, ಕಾಲೇಜುಗಳು ಆರಂಭವಾಗಿವೆ. ರೈತರು ಬಿತ್ತನೆಗೆ ಸಿದ್ಧರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಹಾಗೂ ವಾಸಸ್ಥಳ ಪ್ರಮಾಣ ಪತ್ರಗಳು ಸಕಾಲಕ್ಕೆ ಸಿಗುತ್ತಿಲ್ಲ. ರೈತರು ಬಿತ್ತನೆಬೀಜ, ಗೊಬ್ಬರವನ್ನು ರಿಯಾಯಿತಿಯಲ್ಲಿ ಖರೀದಿಸಲು ಜಮೀನಿನ ಪಹಣೆ ಅಗತ್ಯವಿದೆ. ಕಂಪ್ಯೂಟರ್ ಸಮಸ್ಯೆಯಿಂದಾಗಿ ನಾಡಕಚೇರಿಯಲ್ಲಿ ಪಹಣೆ ಕೂಡ ಸಕಾಲಕ್ಕೆ ಸಿಗುತ್ತಿಲ್ಲ’ ಎಂದು ರೈತರು ಅಳಲು ತೋಡಿಕೊಂಡರು.