ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.
‘ಅರಂಪೋರಾ ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ಆರಂಭಿಸಿದಾಗ ಭದ್ರತಾ ಪಡೆ ಪ್ರತಿದಾಳಿ ನಡೆಸಿದೆ. ಹತ್ಯೆಯಾದ ಉಗ್ರರ ಗುರುತು ಪತ್ತೆಯಾಗಿಲ್ಲ. ಕಾರ್ಯಾಚರಣೆ ಪ್ರಗತಿಲ್ಲಿದೆ’ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.