<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಕಬಡ್ಡಿ ಸಂಸ್ಥೆಯ ಪದಾಧಿಕಾರಿಗಳ ಚುನಾವಣೆಯು ಕಂಠೀರವ ಕ್ರೀಡಾಂಗಣದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ನಡೆಯಿತು.</p>.<p>ಆದರೆ ಹೈಕೋರ್ಟ್ ಸೂಚನೆಯ ಮೇರೆಗೆ ಆರು ಸದಸ್ಯ ಸಂಸ್ಥೆಗಳ ಮತಗಳನ್ನು ಲಕೋಟೆಯಲ್ಲಿ ಭದ್ರಪಡಿಸಲಾಗಿದ್ದು, ಫಲಿತಾಂಶವನ್ನು ತಡೆಹಿಡಿಯಲಾಗಿದೆ.</p>.<p>‘2018ರಲ್ಲಿ ಸಂಸ್ಥೆಯ ಚುನಾವಣೆ ನಡೆಸಲು ಉದ್ದೇಶಿಸಿದಾಗ ತಮಗೂ ಮತದಾನದ ಹಕ್ಕು ನೀಡಬೇಕೆಂದು ಹಾವೇರಿ, ಕೊಪ್ಪಳ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಸ್ಥೆಗಳ ಕೋರಿದ್ದವು. ಈ ಘಟಕಗಳಿಗೆ ಮತದಾನದ ಹಕ್ಕು ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಆದರೆ ಮತಗಳನ್ನು ಲಕೋಟೆಯಲ್ಲಿ ಹಾಕಲು ತಿಳಿಸಿತ್ತು. ಈ ಮತಗಳು ಲಕೋಟೆಯಲ್ಲಿ ಇರುವುದರಿಂದ ಎಣಿಕೆ ಪ್ರಕ್ರಿಯೆ ಆಗಲಿಲ್ಲ’ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>‘ಒಟ್ಟು 56 ಮತಗಳು ಚಲಾವಣೆಯಾಗಿದ್ದು, ವಿವಿಧ ಹುದ್ದೆಗಳಿಗೆ 24 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ’ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಪ್ರಸಾದ್ ಬಾಬು, ಹನುಮಂತೇಗೌಡ, ಕಾರ್ಯದರ್ಶಿ ಸ್ಥಾನಕ್ಕೆ ಮುನಿರಾಜು, ಪಿಳ್ಳಪ್ಪ, ಖಜಾಂಚಿ ಸ್ಥಾನಕ್ಕೆ ನಂದಕುಮಾರ್ ಪಾಟೀಲ, ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ವಿ.ಜಯರಾಂ, ಬಿ.ಸಿ.ಸುರೇಶ್ ಸ್ಪರ್ಧಿಸಿದ್ದಾರೆ. ಚೇರಮನ್ ಆಗಿ ರಾಕೇಶ್ ಮಲಿಕ್ ಈಚೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಕಬಡ್ಡಿ ಸಂಸ್ಥೆಯ ಪದಾಧಿಕಾರಿಗಳ ಚುನಾವಣೆಯು ಕಂಠೀರವ ಕ್ರೀಡಾಂಗಣದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ನಡೆಯಿತು.</p>.<p>ಆದರೆ ಹೈಕೋರ್ಟ್ ಸೂಚನೆಯ ಮೇರೆಗೆ ಆರು ಸದಸ್ಯ ಸಂಸ್ಥೆಗಳ ಮತಗಳನ್ನು ಲಕೋಟೆಯಲ್ಲಿ ಭದ್ರಪಡಿಸಲಾಗಿದ್ದು, ಫಲಿತಾಂಶವನ್ನು ತಡೆಹಿಡಿಯಲಾಗಿದೆ.</p>.<p>‘2018ರಲ್ಲಿ ಸಂಸ್ಥೆಯ ಚುನಾವಣೆ ನಡೆಸಲು ಉದ್ದೇಶಿಸಿದಾಗ ತಮಗೂ ಮತದಾನದ ಹಕ್ಕು ನೀಡಬೇಕೆಂದು ಹಾವೇರಿ, ಕೊಪ್ಪಳ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಸ್ಥೆಗಳ ಕೋರಿದ್ದವು. ಈ ಘಟಕಗಳಿಗೆ ಮತದಾನದ ಹಕ್ಕು ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಆದರೆ ಮತಗಳನ್ನು ಲಕೋಟೆಯಲ್ಲಿ ಹಾಕಲು ತಿಳಿಸಿತ್ತು. ಈ ಮತಗಳು ಲಕೋಟೆಯಲ್ಲಿ ಇರುವುದರಿಂದ ಎಣಿಕೆ ಪ್ರಕ್ರಿಯೆ ಆಗಲಿಲ್ಲ’ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>‘ಒಟ್ಟು 56 ಮತಗಳು ಚಲಾವಣೆಯಾಗಿದ್ದು, ವಿವಿಧ ಹುದ್ದೆಗಳಿಗೆ 24 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ’ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಪ್ರಸಾದ್ ಬಾಬು, ಹನುಮಂತೇಗೌಡ, ಕಾರ್ಯದರ್ಶಿ ಸ್ಥಾನಕ್ಕೆ ಮುನಿರಾಜು, ಪಿಳ್ಳಪ್ಪ, ಖಜಾಂಚಿ ಸ್ಥಾನಕ್ಕೆ ನಂದಕುಮಾರ್ ಪಾಟೀಲ, ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ವಿ.ಜಯರಾಂ, ಬಿ.ಸಿ.ಸುರೇಶ್ ಸ್ಪರ್ಧಿಸಿದ್ದಾರೆ. ಚೇರಮನ್ ಆಗಿ ರಾಕೇಶ್ ಮಲಿಕ್ ಈಚೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>