ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಎ ಪ್ರಧಾನ ಕಾರ್ಯದರ್ಶಿ ರಾಜವೇಲು, ‘ಇಲ್ಲಿ ಬ್ಯಾರಿಕೇಡ್ ಹಾಕಿ ಅಥ್ಲೀಟ್ಗಳನ್ನು ನಿರ್ಬಂಧಿಸುತ್ತಾರೆ. ಸಿಂಥೆಟಿಕ್ ಟ್ರ್ಯಾಕ್ ಹಾಳು ಮಾಡಿದ್ದಾರೆ. ಅದರಿಂದಾಗಿ ಇಲ್ಲಿ ನಡೆಯಬೇಕಿದ್ದ ಮುಕ್ತ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ ರಾಂಚಿಗೆ ಸ್ಥಳಾಂತರವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜೆಎಸ್ಡಬ್ಲ್ಯ ಸಂಸ್ಥೆಗೆ ಎಲ್ಲ ಅನುಕೂಲಗಳನ್ನೂ ಮಾಡಿ ಕೊಡುತ್ತಿದೆ. ಆದರೆ, ಅಥ್ಲೆಟಿಕ್ಸ್ಗಾಗಿಯೇ ಇರುವ ಕ್ರೀಡಾಂಗಣದ ಅಭಿವೃದ್ಧಿ ಯನ್ನು ನಿರ್ಲಕ್ಷಿಸಿದೆ’ ಎಂದರು.