ಬೆಂಗಳೂರು: ಇತ್ತೀಚೆಗೆ ನಡೆದ ಸ್ಪಾರ್ಟನ್ಸ್ ಕಪ್ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಷಿಪ್ನಲ್ಲಿ ಚೈತ್ರಾಶ್ರೀ ಎರಡು ಪದಕಗಳನ್ನು ಗೆದ್ದುಕೊಂಡಿದ್ದಾರೆ. ಕಾಟಾ ವಿಭಾಗದಲ್ಲಿ ಚಿನ್ನದ ಸಾಧನೆ ಮಾಡಿದರೆ, ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರು.
ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದಲ್ಲಿ ಟೂರ್ನಿ ನಡೆಯಿತು. ಚೈತ್ರಾ ಶ್ರೀ ಅವರು ರಾಜಾಜಿನಗರದ ಚೈತನ್ಯ ಪಿಯು ಕಾಲೇಜು ವಿದ್ಯಾರ್ಥಿನಿ.