ಚೆನ್ನೈ: ಪ್ರತಿಕೂಲ ಪರಿಸ್ಥಿತಿಯಲ್ಲೂ ಎದೆಗುಂದದೆ ಮುನ್ನುಗ್ಗಿದ ಬೆಂಗಳೂರಿನ ಕರ್ಣ ಕಡೂರು ಮತ್ತು ಸಹ ಚಾಲಕ ನಿಖಿಲ್ ಪೈ ಅವರು ದಕ್ಷಿಣ ಭಾರತ ರ್ಯಾಲಿಯಲ್ಲಿ ಮುನ್ನಡೆ ಉಳಿಸಿಕೊಂಡರು. ಎಫ್ಐಎ ಏಷ್ಯಾ ಪೆಸಿಫಿಕ್ ರ್ಯಾಲಿಯ ಭಾಗವಾಗಿ ನಡೆಯುತ್ತಿರುವ ಸ್ಪರ್ಧೆ, ಅಖಿಲ ಭಾರತ ರ್ಯಾಲಿ ಚಾಂಪಿಯನ್ಷಿಪ್ನ ಕೊನೆಯ ಘಟ್ಟವೂ ಆಗಿದೆ.