ಕಬಡ್ಡಿ ಸಂಸ್ಥೆಯ ಹಿಂದಿನ ಕಾರ್ಯ ಕಾರಿ ಸಮಿತಿಯ ನಾಲ್ಕು ವರ್ಷಗಳ ಆಡಳಿತಾವಧಿ 2019ರ ಸೆ. 19ರಂದು ಪೂರ್ಣಗೊಂಡಿತ್ತು. ಈ ಅವಧಿಗೂ ಮುನ್ನ ಚುನಾವಣೆ ನಡೆಯಬೇಕಿತ್ತು. ಸಮಿತಿಯು ಚುನಾವಣೆ ನಡೆಸದೇ ಬೈಲಾ ಉಲ್ಲಂಘಿಸಿದ್ದು ಖಚಿತವಾಗಿದೆ. ಇದೇ ವರ್ಷದ ಮಾರ್ಚ್ 8ರಂದು ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ಯಾರ ಅನುಮತಿ ಪಡೆಯದೇ ಕಬಡ್ಡಿ ಸಂಸ್ಥೆ ಕಾರ್ಯದರ್ಶಿ ಮಾ. 31ರಂದು ಚುನಾವಣೆ ನಿಗದಿ ಮಾಡಿದ್ದು ಕರ್ನಾಟಕ ಸಂಘಗಳ ಕಾಯ್ದೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ, ಆಡಳಿತಾಧಿಕಾರಿ ನೇಮಿಸಲಾಗಿದೆ ಎಂದು ಸಹಕಾರ ಇಲಾಖೆ ಮೇ 19ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.