ಪದಕ ಗೆಲ್ಲುವ ಸಾಮರ್ಥ್ಯ ಇರುವ 75 ಅಥ್ಲೀಟ್ಗಳನ್ನು ಆಯ್ಕೆಮಾಡಿ ತರಬೇತಿ ನೀಡುವುದು ಯೋಜನೆಯ ಗುರಿಯಾಗಿದ್ದು ಇದಕ್ಕಾಗಿ ಉನ್ನತಾಧಿಕಾರ ಸಮಿತಿ ರಚಿಸಲಾಗಿದೆ. ಕ್ರೀಡಾ ಸಚಿವರು ಇದರ ಅಧ್ಯಕ್ಷರಾಗಿದ್ದು ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರು ಉಪಾಧ್ಯಕ್ಷರಾಗಿರುವರು. ಹಾಕಿ ಆಟಗಾರ ವಿ.ಆರ್.ರಘುನಾಥ್, ಈಜು ಕೋಚ್ ನಿಹಾರ್ ಅಮೀನ್ ಮತ್ತು ಬ್ಯಾಡ್ಮಿಂಟನ್ ಆಟಗಾರ ಅನೂಪ್ ಶ್ರೀಧರ್, ಕ್ರೀಡಾ ವಿಜ್ಞಾನ ಕೇಂದ್ರದ ತಜ್ಞರು ಸಮಿತಿಯ ಸದಸ್ಯರಾಗಿರುವರು.