ರಾಜ್ಯದ ಬಹುತೇಕ ಪ್ಯಾರಾಪಟುಗಳು ಕ್ರೀಡೆಯನ್ನು ನಂಬಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿಂದ ಕ್ರೀಡಾ ಚಟುವಟಿಕೆಗಳು ನಡೆಯದೇ ಇರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಅಂಗವಿಕಲ ಕ್ರೀಡಾಪಟುಗಳ ಕಡೆ ಗಮನ ಹರಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶೇಷ ಹಣಕಾಸು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಶಾಂತ್ ಕುಮಾರ್ ಮನವಿ ಮಾಡಿದ್ದಾರೆ.