ಬೆಂಗಳೂರು: ಜಕಾರ್ತದಲ್ಲಿ ನಡೆದ ಏಷ್ಯಾ ಕ್ರೀಡಾಕೂಟದಲ್ಲಿ ಮಿಂಚಿನ ಓಟದ ಮೂಲಕ ದೇಶಕ್ಕೆ ಚಿನ್ನ ಗೆದ್ದುಕೊಟ್ಟ ಮಂಜೀತ್ ಸಿಂಗ್ ಈಗ ಬೆಂಗಳೂರಿನಲ್ಲಿದ್ದಾರೆ. ಹರಿಯಾಣದ ಜಿಂದ್ ಜಿಲ್ಲೆಯ ಉಜಾನ ಗ್ರಾಮದ ಮಂಜೀತ್, ಭಾರತ ಅಥ್ಲೆಟಿಕ್ ಫೆಡರೇಷನ್ ಸಾಯ್ ಕೇಂದ್ರದಲ್ಲಿ ಆಯೋಜಿಸಿರುವ ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ಷಿಪ್ ಮತ್ತು ಏಷ್ಯಾ ಚಾಂಪಿಯನ್ಷಿಪ್ನಲ್ಲಿ ಉತ್ತಮ ಸಾಮರ್ಥ್ಯ ತೋರಿ ವಿಶ್ವ ಚಾಂಪಿಯನ್ಷಿಪ್ಗೆ ಸಜ್ಜಾಗುವ ಸಿದ್ಧತೆಯಲ್ಲಿದ್ದಾರೆ.