ನವದೆಹಲಿ: ಯುವ ಕುಸ್ತಿಪಟುವಿನ ಕೊಲೆ ಆರೋಪಿ ಎಂದು ಬಿಂಬಿಸಿ ಸುಶೀಲ್ ಕುಮಾರ್ ಅವರಿಗೆ ಸಂಬಂಧಿಸಿದ ಅತಿರಂಜಿತ ವರದಿಗಳನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ಸುಶೀಲ್ ಅವರ ತಾಯಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಒಲಿಂಪಿಯನ್ ಸುಶೀಲ್ ಕುಮಾರ್ ಮತ್ತು ಸಹಚರರನ್ನು ಬಂಧಿಸಲಾಗಿದೆ. ಎಫ್ಐಆರ್ ಕೂಡ ದಾಖಲಾಗಿದೆ.
ಆದರೆ ಕೊಲೆಯ ನಂತರ ಮಾಧ್ಯಮಗಳು ಪ್ರಕಟಿಸಿದ ವರದಿಗಳನ್ನು ಉಲ್ಲೇಖಿಸಿ ಕಮಲಾದೇವಿ ಮತ್ತು ಕಾನೂನು ವಿದ್ಯಾರ್ಥಿ ಶ್ರೀಕಾಂತ್ ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಡಿ.ಎನ್.ಪಟೇಲ್ ಮತ್ತು ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ ಶುಕ್ರವಾರ ವಿಚಾರಣೆ ನಡೆಸಲಿದೆ.