ಬೆಂಗಳೂರು: ಆತಿಥೇಯ ಕರ್ನಾಟಕ ತಂಡಗಳು ಶನಿವಾರ ಇಲ್ಲಿ ಆರಂಭವಾಗಲಿರುವ 72ನೇ ರಾಷ್ಟ್ರೀಯ ಜೂನಿಯರ್ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿವೆ.
ಕರ್ನಾಟಕ ಬ್ಯಾಸ್ಕೆಟ್ಬಾಲ್ ಸಂಸ್ಥೆಯು (ಕೆಬಿಎ) ಭಾರತ ಬ್ಯಾಸ್ಕೆಟ್ ಬಾಲ್ ಫೆಡರೇಷನ್ (ಬಿಎಫ್ಐ) ಸಹಯೋಗದಲ್ಲಿ ಆಯೋಜಿಸಿರುವ ಟೂರ್ನಿಯ ಪಂದ್ಯಗಳು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜನವರಿ 27ರ ವರೆಗೆ ನಡೆಯುವ ಟೂರ್ನಿಯಲ್ಲಿ ಬಾಲಕ ಮತ್ತು ಬಾಲಕಿ ಯರ ವಿಭಾಗದಲ್ಲಿ ತಲಾ 16 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.
ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಆತಿಥೇಯ ಬಾಲಕರು ಮಣಿ ಪುರ ತಂಡವನ್ನು ಹಾಗೂ ಬಾಲಕಿಯರು ಆಂಧ್ರ ತಂಡವನ್ನು ಎದುರಿಸಲಿದ್ದಾರೆ.
‘ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಸುಮಾರು 400 ಸ್ಪರ್ಧಿಗಳು, 80 ಕೋಚ್ಗಳು ಮತ್ತು 50 ತಾಂತ್ರಿಕ ಅಧಿಕಾರಿಗಳು ಪಾಲ್ಗೊಳ್ಳುವರು’ ಎಂದು ಕೆಬಿಎ ಉಪಾಧ್ಯಕ್ಷ ಆರ್.ರಾಜನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಎಫ್ಐ ತಾಂತ್ರಿಕ ಸಮಿತಿ ಮುಖ್ಯಸ್ಥ ನಾರ್ಮನ್ ಐಸಾಕ್, ಕೆಬಿಎ ಪದಾಧಿಕಾರಿಗಳಾದ ಎಸ್.ಗುಣಶೇಖರ, ಆರ್.ಪ್ರಕಾಶ್, ಎಚ್.ಶ್ರೀನಿವಾಸಮೂರ್ತಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.