ನೀರಿನಾಳದಲ್ಲಿ ಡೈವಿಂಗ್ ಮಾಡುತ್ತಿರುವ (ಸ್ಕೂಬಾ ಡೈವಿಂಗ್) ವಿಡಿಯೊ ಒಂದನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿರುವ ನೀರಜ್, ನೀರಿನಾಳದಲ್ಲಿ ಜಾವೆಲಿನ್ ಎಸೆದು ವಿಜಯದ ಸಂಕೇತ ತೋರಿಸಿದ್ದಾರೆ. ಅಸಲಿಗೆ ಅಲ್ಲಿ ಜಾವೆಲಿನ್ ಇರಲಿಲ್ಲ. ಜಾವೆಲಿನ್ ಎಸೆಯುವ ಹಾಗೇ ಅಭಿನಯಿಸಿ ಎಲ್ಲರ ಮನಗೆದ್ದಿದ್ದಾರೆ. ಈ ವೇಳೆ ಹಿನ್ನೆಲೆಯಲ್ಲಿ ಎ.ಆರ್ ರೆಹಮಾನ್ ಅವರ 'ವಂದೇ ಮಾತರಂ' ಗೀತೆ ಕೇಳಿ ಬಂದಿದೆ.